9:45 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ ನೀಡಿವೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

18/03/2025, 14:17

ಬೆಂಗಳೂರು(reporterkarnataka.com): ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.
ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.
ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಬಗ್ಗೆ ಕೇಳಿದಾಗ, ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು