10:37 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ ನೀಡಿವೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

18/03/2025, 14:17

ಬೆಂಗಳೂರು(reporterkarnataka.com): ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.
ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.
ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಬಗ್ಗೆ ಕೇಳಿದಾಗ, ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು