5:24 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ ನೀಡಿವೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

18/03/2025, 14:17

ಬೆಂಗಳೂರು(reporterkarnataka.com): ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.
ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.
ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಬಗ್ಗೆ ಕೇಳಿದಾಗ, ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು