6:12 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

illegal Sand Mining | ಹರಿಹರಪುರ ತುಂಗಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ: ಪಕ್ಷಾತೀತವಾಗಿ ನಡೆಯುತ್ತಿದೆ ಈ ದಂಧೆ!

18/03/2025, 16:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪ ತುಂಗಾ ನದಿ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ. ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ.
ಪಕ್ಷಾತೀತವಾಗಿ ಎಲ್ಲರೂ ಹೊಂದಾಣಿಕೆ ಮೇಲೆ ಮರಳು ದಂಧೆ ಮಾಡುತ್ತಿರುವುದರಿಂದ ಆಡಳಿತ ಪಕ್ಷವಾಗಲಿ, ವಿರೋಧ ಪಕ್ಷದವರಾಗಲಿ ಯಾರೂ ಇದರ ಬಗ್ಗೆ ಸೊಲ್ಲೆತ್ತುತ್ತಿಲ್ಲ. ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಮರಳು
ಸಾಗಾಟ ನಡೆಸಲಾಗುತ್ತಿದೆ.


ಸಾರ್ವಜನಿಕರ ಕಣ್ಣಿಗೆ ಬೀಳಬಾರದೆನ್ನುವ ಉದ್ದೇಶದಿಂದ ದಂಧೆಕೋರರು ರಾತ್ರಿ ವೇಳೆ ಮಾತ್ರ ಕಾರ್ಯಾಚರಣೆ ನಡೆಸುತ್ತಾರೆ.
ಕದ್ದು ಮರಳು ಸಾಗಿಸಿ ಸರ್ಕಾರಿ ಜಾಗದಲ್ಲಿ ಶೇಖರಿಸಿ ಬಳಿಕ ಮಾರಾಟ ಮಾಡಲಾಗುತ್ತದೆ.
ಯಾರಾದ್ರು ಬಂದರೆ ಮಾಹಿತಿ ನೀಡಲು ಸ್ಥಳಿಯ ಕೆಲವು ಯುವಕರನ್ನು ಬಳಕೆ ಮಾಡಲಾಗುತ್ತಿದೆ. ರಸ್ತೆಯುದ್ದಕ್ಕೂ ಅಲ್ಲಲ್ಲೇ ಇಬ್ಬರು ಹುಡುಗರನ್ನ ದಂಧೆಕೋರರು ನಿಲ್ಲಿಸಿರುತ್ತಾರೆ.
ಸ್ಥಳಕ್ಕೆ ಡಿವೈಎಸ್ಪಿ, ಪಿಎಸ್ಐ ನೇತೃತ್ವದಲ್ಲಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನದಿ ಬಳಿ ಹೋಗೋ ದಾರಿಗೆಲ್ಲಾ ಟ್ರಂಚ್ ಪೊಲೀಸರು ನಿರ್ಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು