3:29 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

18/03/2025, 20:31

ನವದೆಹಲಿ (reporterkarnataka.com): ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಇಂದು ಈ ಸಂಬಂಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಇಂದು ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. UIDAI ಮತ್ತು ECI ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ.
ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಆದ್ದರಿಂದ, EPIC ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6) ರ ನಿಬಂಧನೆಗಳ ಪ್ರಕಾರ ಕ್ರಮ ವಹಿಸಲಾಗುವುದು. ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು