6:37 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕೋಲಾರ: ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗದ ಭರವಸೆ

18/03/2025, 22:37

ಬೆಂಗಳೂರು (reporterkarnataka.com): ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ.ಎಲ್.ಅನಿಲ್‍ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಯಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಾಲೂಕುಗಳಲ್ಲಿ ಬಿಜಿಎಂಎಲ್ ವ್ಯಾಪ್ತಿಯಲ್ಲಿ 12,335.51 ಎಕರೆ ಹಾಗೂ ಬಿಇಎಂಎಲ್ ವ್ಯಾಪ್ತಿಯಲ್ಲಿ 1846 ಎಕರೆ ಜಮೀನಿರುತ್ತದೆ. ಬಿಜಿಎಂಎಲ್ ಹಾಗೂ ಬಿಇಎಂಎಲ್ ಸಂಸ್ಥೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತಿಳಿಸಿದರು.
ಬಿಇಎಂಎಲ್ ಗೆ ನೀಡಿದ 1846 ಎಕರೆ ಜಮೀನಿನಲ್ಲಿ ಸಂಸ್ಥೆಯು ತನ್ನ ಉದ್ದೇಶಿತ ಕಾರ್ಯ ಚಟುವಟಿಕೆಗಳಿಗಾಗಿ ಉಪಯೋಗಿಸಿಕೊಂಡು ಸಂಸ್ಥೆಗೆ ಅವಶ್ಯವಿಲ್ಲದ 967.20 ಜಮೀನನ್ನು ಹೆಚ್ಚುವರಿ ಜಮೀನೆಂದು ನಿರ್ಧರಿಸಿ ಸರ್ಕಾರವು ಹಿಂತೆಗೆದುಕೊಂಡಿದೆ. ಬಿಜಿಎಂಎಲ್‍ನಿಂದ ಯಾವುದೇ ಜಮೀನನ್ನು ಹಿಂತೆಗೆದುಕೊಂಡಿರುವುದಿಲ್ಲ. ಬಿಇಎಂಎಲ್ ನಿಂದ ಹಿಂತೆಗೆದುಕೊಡ ಜಮೀನಿನ ಪೈಕಿ 658.20 ಎಕರೆ ಜಮೀನನ್ನು ಕೆಐಡಿಬಿಗೆ ಮಂಜೂರು ಮಾಡಲಾಗಿದೆ. ಕೆಐಡಿಬಿ ಯಿಂದ ಇಲ್ಲಿಯವರೆಗೆ ಯಾವುದೇ ಕಂಪನಿಗೆ ಹಂಚಿಕೆ ಮಾಡಿರುವುದಿಲ್ಲ. ಹಂಚಿಕೆ ದರ ನಿಗದಿ ಸಂಬಂಧ ಮಂಡಳಿಯ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು