7:21 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಕೋಲಾರ: ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗದ ಭರವಸೆ

18/03/2025, 22:37

ಬೆಂಗಳೂರು (reporterkarnataka.com): ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ.ಎಲ್.ಅನಿಲ್‍ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಯಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಾಲೂಕುಗಳಲ್ಲಿ ಬಿಜಿಎಂಎಲ್ ವ್ಯಾಪ್ತಿಯಲ್ಲಿ 12,335.51 ಎಕರೆ ಹಾಗೂ ಬಿಇಎಂಎಲ್ ವ್ಯಾಪ್ತಿಯಲ್ಲಿ 1846 ಎಕರೆ ಜಮೀನಿರುತ್ತದೆ. ಬಿಜಿಎಂಎಲ್ ಹಾಗೂ ಬಿಇಎಂಎಲ್ ಸಂಸ್ಥೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತಿಳಿಸಿದರು.
ಬಿಇಎಂಎಲ್ ಗೆ ನೀಡಿದ 1846 ಎಕರೆ ಜಮೀನಿನಲ್ಲಿ ಸಂಸ್ಥೆಯು ತನ್ನ ಉದ್ದೇಶಿತ ಕಾರ್ಯ ಚಟುವಟಿಕೆಗಳಿಗಾಗಿ ಉಪಯೋಗಿಸಿಕೊಂಡು ಸಂಸ್ಥೆಗೆ ಅವಶ್ಯವಿಲ್ಲದ 967.20 ಜಮೀನನ್ನು ಹೆಚ್ಚುವರಿ ಜಮೀನೆಂದು ನಿರ್ಧರಿಸಿ ಸರ್ಕಾರವು ಹಿಂತೆಗೆದುಕೊಂಡಿದೆ. ಬಿಜಿಎಂಎಲ್‍ನಿಂದ ಯಾವುದೇ ಜಮೀನನ್ನು ಹಿಂತೆಗೆದುಕೊಂಡಿರುವುದಿಲ್ಲ. ಬಿಇಎಂಎಲ್ ನಿಂದ ಹಿಂತೆಗೆದುಕೊಡ ಜಮೀನಿನ ಪೈಕಿ 658.20 ಎಕರೆ ಜಮೀನನ್ನು ಕೆಐಡಿಬಿಗೆ ಮಂಜೂರು ಮಾಡಲಾಗಿದೆ. ಕೆಐಡಿಬಿ ಯಿಂದ ಇಲ್ಲಿಯವರೆಗೆ ಯಾವುದೇ ಕಂಪನಿಗೆ ಹಂಚಿಕೆ ಮಾಡಿರುವುದಿಲ್ಲ. ಹಂಚಿಕೆ ದರ ನಿಗದಿ ಸಂಬಂಧ ಮಂಡಳಿಯ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು