4:13 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕೋಲಾರ: ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗದ ಭರವಸೆ

18/03/2025, 22:37

ಬೆಂಗಳೂರು (reporterkarnataka.com): ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ.ಎಲ್.ಅನಿಲ್‍ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಯಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಾಲೂಕುಗಳಲ್ಲಿ ಬಿಜಿಎಂಎಲ್ ವ್ಯಾಪ್ತಿಯಲ್ಲಿ 12,335.51 ಎಕರೆ ಹಾಗೂ ಬಿಇಎಂಎಲ್ ವ್ಯಾಪ್ತಿಯಲ್ಲಿ 1846 ಎಕರೆ ಜಮೀನಿರುತ್ತದೆ. ಬಿಜಿಎಂಎಲ್ ಹಾಗೂ ಬಿಇಎಂಎಲ್ ಸಂಸ್ಥೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತಿಳಿಸಿದರು.
ಬಿಇಎಂಎಲ್ ಗೆ ನೀಡಿದ 1846 ಎಕರೆ ಜಮೀನಿನಲ್ಲಿ ಸಂಸ್ಥೆಯು ತನ್ನ ಉದ್ದೇಶಿತ ಕಾರ್ಯ ಚಟುವಟಿಕೆಗಳಿಗಾಗಿ ಉಪಯೋಗಿಸಿಕೊಂಡು ಸಂಸ್ಥೆಗೆ ಅವಶ್ಯವಿಲ್ಲದ 967.20 ಜಮೀನನ್ನು ಹೆಚ್ಚುವರಿ ಜಮೀನೆಂದು ನಿರ್ಧರಿಸಿ ಸರ್ಕಾರವು ಹಿಂತೆಗೆದುಕೊಂಡಿದೆ. ಬಿಜಿಎಂಎಲ್‍ನಿಂದ ಯಾವುದೇ ಜಮೀನನ್ನು ಹಿಂತೆಗೆದುಕೊಂಡಿರುವುದಿಲ್ಲ. ಬಿಇಎಂಎಲ್ ನಿಂದ ಹಿಂತೆಗೆದುಕೊಡ ಜಮೀನಿನ ಪೈಕಿ 658.20 ಎಕರೆ ಜಮೀನನ್ನು ಕೆಐಡಿಬಿಗೆ ಮಂಜೂರು ಮಾಡಲಾಗಿದೆ. ಕೆಐಡಿಬಿ ಯಿಂದ ಇಲ್ಲಿಯವರೆಗೆ ಯಾವುದೇ ಕಂಪನಿಗೆ ಹಂಚಿಕೆ ಮಾಡಿರುವುದಿಲ್ಲ. ಹಂಚಿಕೆ ದರ ನಿಗದಿ ಸಂಬಂಧ ಮಂಡಳಿಯ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು