10:37 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

Drugs Mafia | ಮಂಗಳೂರು ಪೊಲೀಸರಿಂದ ಬೃಹತ್ ಪ್ರಮಾಣದ ಡ್ರಗ್ಸ್ ವಶ: ದ.ಕ. ಮಹಿಳಾ ಕಾಂಗ್ರೆಸ್ ಅಭಿನಂದನೆ

19/03/2025, 11:19

ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಿಸಿಬಿ ಪೊಲೀಸರು ಬೃಹತ್ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತರನ್ನು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಯೋಗ ಭೇಟಿಯಾಗಿ ಸೋಮವಾರ ಅಭಿನಂದಿಸಿತು.
ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ, ಮಂಗಳೂರಿನ ಸಿಸಿಬಿ ಪೊಲೀಸರ ತಂಡ ಬೃಹತ್ ಮಾದಕ ಜಾಲವನ್ನು ಭೇದಿಸಿ ರಾಜ್ಯ ಮತ್ತು ಜಿಲ್ಲೆಯ ಯುವಕರ ಬದುಕಿಗೆ ಮಾರಕವಾಗಿದ್ದ ಬಹುದೊಡ್ಡ ಅಪಾಯವೊಂದನ್ನು ತಪ್ಪಿಸಿದೆ. ಮಾದಕ ದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣ ಮತ್ತು ಸ್ವಸ್ಥ ಪರಿಸರ ಕಟ್ಟಿಕೊಡಲು ರಾಜ್ಯ ಕಾಂಗ್ರೆಸ್ ಸಕರಕಾರ ಬದ್ಧವಾಗಿದೆ. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಇಲಾಖೆಯನ್ನು ಗುರುತಿಸಿ ರಾಜ್ಯ ಸರ್ಕಾರದಿಂದ ಸೂಕ್ತ ಬಹುಮಾನ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಸಿ.ಸಿ.ಆರ್.ಬಿ ಉಪ ಆಯುಕ್ತೆ ಗೀತಾ ಕುಲಕರ್ಣಿ, ಮಂಗಳೂರು ಪೋಲೀಸ್ ದಕ್ಷಿಣ ಉಪವಿಭಾಗ ಆಯುಕ್ತೆ ಧನ್ಯಾ ನಾಯಕ್, ಸಂಚಾರ ಪೋಲೀಸ್ ಮಂಗಳೂರು ನಗರ ಉಪ ವಿಭಾಗದ ಉಪ ಆಯುಕ್ತೆ ನಜ್ಮಾ ಫಾರೂಕಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸ್ವರೂಪ ಎನ್. ಶೆಟ್ಟಿ. ಗೀತಾ ಅತ್ತಾವರ, ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್, ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೂಪಾ ಚೇತನ್, ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಜಾತ ದೀಪಕ್, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಶಾಂತಲಾ ಗಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು