10:45 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

APMC | ಯಶವಂತಪುರದಿಂದ 4 ಕೃಷಿ ಉತ್ಪನ್ನ ಶಿಫ್ಟ್: ದಾಸನಪುರ ಉಪ ಮಾರುಕಟ್ಟೆಗೆ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಶುಂಠಿ ಸ್ಥಳಾಂತರ

19/03/2025, 16:59

ಬೆಂಗಳೂರು(reporterkarnataka.com): ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು.
ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು.
ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗಿದೆ.
ಎಪಿಎಂಸಿಗಳನ್ನು ಹೊರತುಪಡಿಸಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕಾಯ್ದೆ ಅಡಿ ವಿವಿಧ ಅವಕಾಶ ಕಲ್ಪಿಸಿ 4 ಖಾಸಗಿ ಮಾರುಕಟ್ಟೆ ಹಾಘೂ 65 ನೇರ ಖರೀದಿ ಕೇಂದ್ರಗಳನ್ನು ನಡೆಸಲು ಲೈಸೆನ್ಸ್ ನೀಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು