12:20 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Atrocity Against Women | ಮಲ್ಪೆಯಲ್ಲಿ ಮಹಿಳೆಯ ಕಟ್ಟಿ ಹಾಕಿ ಥಳಿಸಿದ ಪ್ರಕರಣ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

19/03/2025, 21:20

ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಇಂತಹ ಅನಾಗರೀಕ ವರ್ತನೆ ಸಹಿಸಲಾಗದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು