8:36 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:38

ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು