9:07 AM Monday24 - March 2025
ಬ್ರೇಕಿಂಗ್ ನ್ಯೂಸ್
IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ,… ಹನಿಟ್ರ್ಯಾಪ್ ಪ್ರಕರಣ: ವಿಧಾನ ಸಭೆಯಲ್ಲಿ ಬಿಜೆಪಿ- ಜೆಡಿಎಸ್ ನಿಂದ ಭಾರೀ ಪ್ರತಿಭಟನೆ; ಸ್ಫೀಕರ್… ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:38

ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು