2:13 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್: ವಿಧಾನಸಭೆಯಲ್ಲಿ ವೇದವ್ಯಾಸ ಕಾಮತ್ ಆಕ್ರೋಶ

20/03/2025, 22:04

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆಯನ್ನೂ ಮಾಡಿಲ್ಲ, ಮಾಡಿದ ಅಲ್ಪಸ್ವಲ್ಪ ಘೋಷಣೆಯನ್ನು ಅನುಷ್ಠಾನಕ್ಕೆ ತಂದಿಲ್ಲವೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಪಾಲಿಗೆ ಬಜೆಟ್ ಎಂಬುದು ಕೇವಲ ಹಾಳೆಗಳ ಮೇಲಿನ ಅಕ್ಷರಗಳು ಅಷ್ಟೇ ಆದರೆ ಮುಖ್ಯಮಂತ್ರಿಗಳು ಗಂಟೆಗಟ್ಟಲೆ ನಿಂತು ಬಜೆಟ್ ಭಾಷಣ ಮಾಡುವುದು ಯಾಕೆ? ನಾವೆಲ್ಲ ಅದನ್ನು ಕೇಳಿಸಿಕೊಳ್ಳುವುದು ಯಾಕೆ? ಈ ಅಧಿವೇಶನ ಯಾಕೆ? ನನ್ನ ಬಳಿ 2023-24 ಹಾಗೂ 2024-25 ಸಾಲಿನ ಬಜೆಟ್ ನಲ್ಲಿ ಇದೇ ಸರ್ಕಾರ ಮೀನುಗಾರಿಕೆಗೆ, ಪ್ರವಾಸೋದ್ಯಮಕ್ಕೆ, ವಾಣಿಜ್ಯ ಕ್ಷೇತ್ರಕ್ಕೆ ಸೇರಿದಂತೆ ಕೆಲವೇ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಬಜೆಟ್ ನಲ್ಲೇ ಘೋಷಿಸಿರುವ ಪಟ್ಟಿ ಇವೆ. ಅವುಗಳಲ್ಲಿ ಯಾವುದನ್ನು ಸರ್ಕಾರ ಸಮರ್ಥವಾಗಿ ಅನುಷ್ಠಾನಗೊಳಿಸಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸರ್ಕಾರಕ್ಕೆ ಸವಾಲೆಸೆದರು.
ಸದ್ಯ ಕರಾವಳಿ ಜಿಲ್ಲೆಗಳ ಜನತೆ ಕೇವಲ ಘೋಷಣೆಗಳನ್ನು ಕೇಳಿಸಿಕೊಂಡು ಕುಣಿದು ಕುಪ್ಪಳಿಸಬೇಕಷ್ಟೇ ಎಂಬಂತಹ ವಾತಾವರಣ ನಿರ್ಮಾಣವಾಗಿರುವುದು ದುರಂತವಾಗಿದ್ದು, ಕರಾವಳಿಯ ಸಮಗ್ರ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಸಂಪಾದನೆಯೇ ಈ ಸರ್ಕಾರದ ದೊಡ್ಡ ಸಾಧನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು