7:13 PM Friday10 - July 2026
ಬ್ರೇಕಿಂಗ್ ನ್ಯೂಸ್
ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ…

ಇತ್ತೀಚಿನ ಸುದ್ದಿ

Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ

22/03/2025, 21:09

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದೆ. ಅವರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮೈಸೂರಲ್ಲಿ ಐಪಿಎಸ್ ಅಧಿಕಾರಿಯ ವಾಹನ ಜಖಂ ಮಾಡಿದರು. ಒಂದು ಸಾವಿರ ಜನರ ಮೇಲೆ ಎಫ್ಐಆರ್ ಹಾಕಿ ಹದಿನೇಳು ಮಂದಿಯನ್ನು ಅರೆಸ್ಟ್ ಮಾಡಿದರೆ ಅವರನ್ನು ಅರೆಸ್ಟ್ ಮಾಡಬಾರದು ಎಂದು ಪೋಲೀಸರ ಮೇಲೆ ಒತ್ತಡ ಇತ್ತು. ಕೇಸ್ ದಾಖಲಿಸದ ಅಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿದ್ದಾರೆ. ಒಂದು ಸಮುದಾಯದ ಜನ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ ಎಂದರು.

ಶಾಂತಿ ಸುವ್ಯವಸ್ಥೆ ಹೋಗಿದೆ. ಆತ್ಮಹತ್ಯೆಗಳು ಎಷ್ಟಾಗಿದ್ದಾವೇ? ಸರ್ಕಾರಿ ನೌಕರರು ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಮರೀಚಿಕೆ ಆಗಿದೆ. ಮಾದಕ ವಸ್ತುಗಳು, ಸ್ಮಗ್ಲಿಂಗ್, ರಿಯಲ್ ಎಸ್ಟೇಟ್ ಈ ರೀತಿಯಲ್ಲಿ ಪೊಲೀಸರದ್ದೇ ಇನ್ವಾಲ್ ಮೆಂಟ್ ಇದೆ.
ಹೀಗಾಗಿ ಪೊಲೀಸರು ಪೊಲೀಸರಾಗಿ ಉಳಿದಿಲ್ಲ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯನ್ನು ಹಾಳು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು