5:34 AM Sunday5 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ ಆರಗ ಜ್ಞಾನೇಂದ್ರ

22/03/2025, 21:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಅನಾವಶ್ಯಕವಾಗಿ ಇವರ ಪ್ರತಿಷ್ಠೆಗಾಗಿ ಬಂದ್ ಕರೆ ಕೊಟ್ಟಿದ್ದಾರೆ. ಯಾರೋ ಎಲ್ಲೋ ಕುತ್ಕೊಂಡು ಮಾಡಿದರೆ ಆಗುತ್ತಾ? ಕರ್ನಾಟಕ ಬಂದ್ ಆಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಇವತ್ತು ಎಸ್ ಎಸ್ ಎಲ್ ಸಿ ಪರಿಕ್ಷೆ ಕೂಡ ಇದೆ. ಆ ರೀತಿ ಬಂದಾಗುವುದಿಲ್ಲ, ಆಗಬಾರದು ಕೂಡ. ಯಾರೋ ಪುಂಡರು ಮಾಡುವ ಕೆಲಸಕ್ಕೆ ನಮ್ಮ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆ ಯಾಕೆ ಕೊಡಬೇಕು.
ಬೆಳಗಾವಿಯಲ್ಲಿ ನಾಲ್ಕು ಜನ ಪುಂಡರು ಮಾಡಿರುವ ಕೆಲಸಕ್ಕೆ ಇಡೀ ಮರಾಠ ಸಮುದಾಯ ಮಾಡಿದೆ ಎಂದು ಹೇಳಲು ಆಗುವುದಿಲ್ಲ. ನಮ್ಮ ಕರ್ನಾಟಕದಲ್ಲಿ ಯಾವುದು ನಾಲ್ಕು ಜನ ಕೆಟ್ಟ ಕೆಲಸ ಮಾಡಿದರೆ ಇಡೀ ಕರ್ನಾಟಕ ಮಾಡಿದಂತಾಗುವುದಿಲ್ಲ. ಇದಕ್ಕೆ ಪೊಲೀಸ್ ಅವ್ರು ಆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಕರ್ನಾಟಕ ಮತ್ತು ಮಹಾರಾಷ್ಟ್ರ, ಭಾರತ ಮತ್ತು ಪಾಕಿಸ್ತಾನವೇ? ಈ ರೀತಿಯ ಡಿವೈಡ್ ಅಂಡ್ ರೂಲ್ ಮಾಡಬಾರದು. ಯಾರನ್ನು ಒಬ್ಬರನ್ನೊಬ್ಬರು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಯಾರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅವರಿಗೆ ಎರಡು ರಾಜ್ಯವು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು