1:26 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

23/03/2025, 20:31

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ಮತ್ತೊಂದು ವಿಮಾನಯಾನ ಅತಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈವರೆಗೆ ಎರಡು ವಿಮಾನಗಳ ಸೇವೆಯಿದೆ. ಆದರೆ, ಮತ್ತೊಂದು ವಿಮಾನ ಯಾನದ ಅವಶ್ಯಕತೆಯಿದ್ದು, ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಂಡಿಗೋ ತ್ವರಿತವಾಗಿ ವಿಮಾನ ಸೇವೆಗೆ ನಿರ್ಣಯ ಕೈಗೊಂಡಿದೆ.
ವಿಮಾನ ಹಾರಾಟ ಸಮಯ ಇಂತಿದೆ. Bengaluru – Hubballi 6E7056 9:55 AM – 11:20 AM ಹಾಗೂ Hubballi – Bengaluru 6E 7263 11:55 AM – 1:20 PM. ಈ ವಿಮಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.
ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ ಕಲ್ಪಿಸಿದ್ದಕ್ಕಾಗಿ ಸಚಿವ ಜೋಶಿ ಅವರು ಇಂಡಿಗೋ ಆಡಳಿತ ವರ್ಗಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ, ಹುಬ್ಬಳ್ಳಿ ಮತ್ತು ಅಹ್ಮದಾಬಾದ್‌ ನಡುವೆಯೂ ವಿಮಾನಯಾನ ಆರಂಭಿಸುವಂತೆ ಇಂಡಿಗೋ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು