10:13 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ

24/03/2025, 15:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು.

ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ
ಬಿಜೆಪಿ ಮಧ್ಯೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮ
ಕ್ರೆಡಿಟ್ ವಾರ್ ಆಗಿ ಪರಿವರ್ತನೆಗೊಂಡಿತು. ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್, ಕಾಂಗ್ರೆಸ್ ಶಾಸಕ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ, ಬಿಜೆಪಿಯ ಸಿ.ಟಿ. ರವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿ.ಟಿ.ರವಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅವರನ್ನು ಹೊತ್ತು ಕುಣಿದರು.
ಸಚಿವ ಜಾರ್ಜ್, ಶಾಸಕ ತಮ್ಮಯ್ಯ ಎದುರೇ ಸಿ.ಟಿ.ರವಿ ಹೊತ್ತು ಡ್ಯಾನ್ಸ್ ಮಾಡಿದರು.
ಕಾರ್ಯಕ್ರಮ ಮುಗಿಯುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿತ್ತು. ಇಂದು ಹೊರರೋಗಿ ವಿಭಾಗವನ್ನು ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

ಒಂದೆಡೆ ಸಿ.ಟಿ.ರವಿಗೆ ಜೈ…ಕೇಳಿ ಬಂದರೆ, ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ ಮಾರ್ದನಿಸುತ್ತಿತ್ತು.
ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರಿಂದ ಘೋಷಣೆ ಮೊಳಗಿತು. ಒಂದು ಗುಂಪಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಗುಂಪಿನಿಂದ ಘೋಷಣೆ ಮೊಳಗುತ್ತಿತು. ನೆರದಿದ್ದವರಿಗೆ ಯಾರೂ, ಯಾರ ಪರ ಕುಗ್ತಿದ್ದಾರೆಂಬುದೇ ತಿಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು