12:44 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Fire Tragedy | ಮಾಣಿ ಸಮೀಪದ ಪೆರಾಜೆ ಮಠದ ಬಳಿ ಗುಡ್ಡಕ್ಕೆ ಬೆಂಕಿ: ಪುನಾರ್ಪುಳಿ ಗಿಡಗಳಿಗೆ ಹಾನಿ

25/03/2025, 11:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರ ಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಸೋಮವಾರ
ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಹಾನಿಯುಂಟಾಗಿದೆ.


ಸ್ಥಳೀಯರು ನೀರುಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು. ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ಮನೆಗಳು ಹಾಗೂ ಏರ್ಟೆಲ್ ನವರ ಟವರ್ ಇದ್ದು ಸುತ್ತಲೂ ಬೆಂಕಿ ಆವರಿಸಿದ್ದು ಹಾನಿಯಾಗಲಿಲ್ಲ. ಮಠದ ಆಡಳಿತ ಕ್ರಿಯಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಸ್ಥಳಕ್ಕಾಗಮಿಸಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು