3:42 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Bantwal Bjp | ಬಿ.ಸಿ. ರೋಡ್: ಬಿಜೆಪಿ ಬಂಟ್ವಾಳ ‌ಮಂಡಲ ವತಿಯಿಂದ ಸಹಕಾರಿ ‌ಸಮಾವೇಶ

25/03/2025, 14:54

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸಹಕಾರಿ ಸಂಘದ ಚುನಾವಣೆಯ ಕಾರ್ಯವನ್ನು ಬಿಜೆಪಿ ಮಂಡಲ ಅತ್ಯಂತ ಯಶಸ್ವಿಯಾಗಿ ನಿಷ್ಠೆಯಿಂದ ನಿರ್ವಹಿಸಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.
ಅವರು ಬಂಟ್ವಾಳ ಬಿಜೆಪಿ ‌ಮಂಡಲದ ವತಿಯಿಂದ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಸಹಕಾರಿ ‌ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಪಕ್ಷ ದೊಡ್ಡ ಪಕ್ಷವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ಪ್ರತಿ ಚುನಾವಣೆಯಲ್ಲಿ ಸಣ್ಣ ಪುಟ್ಟ ‌ಗೊಂದಲಗಳು ಸಹಜ. ಅವೆಲ್ಲವನ್ನೂ ಬದಿಗಿರಿಸಿ ನಿರೀಕ್ಷೆಗೂ ಮೀರಿ ಸಹಕಾರಿ ಕ್ಷೇತ್ರದಲ್ಲಿ ಗೆಲುವು ‌ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅರ್ಥಿಕವಾಗಿ ಗಟ್ಟಿ ಮಾಡುವುದರ ಜೊತೆ ಪಕ್ಷವನ್ನು ಸದೃಢಗೊಳಿಸಲು ಸಹಕಾರಿ ಕ್ಷೇತ್ರದ ಗೆಲುವು ಪೂರಕವಾಗಿವೆ ಎಂದು ತಿಳಿಸಿದ ಅವರು, ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಪ್ರತಿ ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿದರೆ ಮುಂದಿನ ಪ್ರತಿ ಚುನಾವಣೆಯ ಗೆಲುವು ನಮ್ಮದಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಹಕಾರಿ ಸಂಸ್ಥೆಯ ಜವಾಬ್ದಾರಿ ದೊಡ್ಡದಿದ್ದು, ನಿಷ್ಠೆಯಿಂದ ಮಾಡಿದರೆ ಪಕ್ಷಕ್ಕೂ ‌ಒಳಿತಾಗಲಿದೆ ಎಂದು ಅವರು ತಿಳಿಸಿದರು.
ಸಂಸದ ಕ್ಯಾ.ಬೃಜೇಶ್ ಚೌಟ ಮಾತನಾಡಿ, ಸಹಕಾರಿ ಕ್ಷೇತ್ರ ಪ್ರಮುಖ ಪಾತ್ರವನ್ನು ರಾಷ್ಟ್ರನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ದಕ್ಷಿಣ ಕನ್ನಡ ಸಹಕಾರ ಕ್ಷೇತ್ರ ಅಧ್ಯಯನಯೋಗ್ಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಮಹತ್ವದ ಯೋಜನೆಗಳನ್ನು ನಿರ್ದಿಷ್ಟ ಗುರಿಯೊಂದಿಗೆ ನಿಜವಾದ ಅರ್ಥದಲ್ಲಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಹಕಾರಿ ಸಮಾವೇಶ ಮಾಡಲಾಗುತ್ತದೆ. ಬಳಿಕ ಕೇಂದ್ರ ಸಚಿವ ಅಮಿತ್ ಶಾ ಅವರು ಜಿಲ್ಲೆಗೆ ಬಂದಾಗ ಜಿಲ್ಲಾ ಮಟ್ಟದ ಸಮಾವೇಶ ಮಾಡಲಾಗುತ್ತದೆ ಎಂದರು. ಬಿಜೆಪಿಯ ಗೆಲುವಿನ ಓಟವನ್ನು ಬಲಾಢ್ಯ ರಾಜಕಾರಣಿಗಳು ವಿರೋಧ ಪಕ್ಷದಲ್ಲಿದ್ದರೂ ನಿಲ್ಲಿಸಲು ಸಾಧ್ಯವಿಲ್ಲ ಎಂದರು. ಸಹಕಾರ ಸಂಸ್ಥೆಗಳಲ್ಲಿ ಗೆದ್ದವರೂ ನಮ್ಮವರೇ, ಸೋತವರೂ ನಮ್ಮವರೇ ಆಗಿದ್ದಾರೆ ಎಂದರು.
ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಪ್ರೇರಣಾದಾಯಕ ಶಕ್ತಿ ಬಂಟ್ವಾಳವಾಗಿದ್ದು, ಶಾಸಕ ರಾಜೇಶ್ ನಾಯ್ಕ್ ಅವರ ನೇತ್ರತ್ವವೇ ಕಾರಣ ಎಂದು ಅವರು ಹೇಳಿದರು.
ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಸಹಕಾರಿ ಸಂಚಾಲಕ ರಾಜಾರಾಮ ಭಟ್ ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ವಹಿಸಿದ್ದರು.


ಈ ಸಂದರ್ಭ ಸಹಕಾರಿ ರತ್ನ ರವೀಂದ್ರ ಕಂಬಳಿ ಅವರನ್ನು ಹಾಗೂ ಸಹಕಾರಿ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸಿದ ಪ್ರಕೋಷ್ಢದ ಸಂಚಾಲಕ ಜಯರಾಮ ರೈ ಅವರನ್ನು ಗೌರವಿಸಲಾಯಿತು.
ಅಭೂತಪೂರ್ವ ಗೆಲುವು ಸಾಧಿಸಿ, ಪಕ್ಷದಿಂದ ಗೌರವ ಸ್ವೀಕರಿಸಿದ ಸಹಕಾರಿ ಸಂಘಗಳ ಹೆಸರನ್ನು ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ವಾಚಿಸಿದರು.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಹಕಾರಿ ಸಂಘಗಳು ನಿರ್ದೇಶಕರಗಳಾಗಿ ಆಯ್ಕೆಯಾದ ನಿರ್ದೇಶಕರುಗಳಿಗೆ ಗೌರವಾರ್ಪಣೆ ಮಾಡಲಾಯಿತು. ಬಂಟ್ವಾಳ ಮಂಡಲ ಸಹಕಾರಿ ಪ್ರಕೋಷ್ಠ ಸಂಚಾಲಕ ಜಯರಾಮ ರೈ ಸ್ವಾಗತಿಸಿದರು. ಮಾತೇಶ್ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು