5:16 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

25/03/2025, 20:41

ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ, 9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು. ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು.
ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್‌ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು