10:44 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

Support Saturday | ಅನಿರ್ವೇದ ಸಂಸ್ಥೆಯಿಂದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ʻನೆರವಿನ ಶನಿವಾರʼ ಉಪಕ್ರಮಕ್ಕೆ ಚಾಲನೆ

26/03/2025, 13:16

ಮಂಗಳೂರು(reporterkarnataka.com): ನಗರದ ಮಾನಸಿಕ ಯೋಗಕ್ಷೇಮ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರೇತರ ಸಂಸ್ಥೆ ಎನಿಸಿರುವ ʻಅನಿರ್ವೇದʼವು ನಗರದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ಉಚಿತ ಮತ್ತು ಅಂತರ್ಗತ ʻನೆರವಿನ ಶನಿವಾರʼ ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ.


ಇಫ್ತಿಕಾರ್ ಆಲಿ (ಅಧ್ಯಕ್ಷರು, ಕರ್ನಾಟಕದ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್) ಅವರು ಮಂಗಳವಾರ ನಗರದಲ್ಲಿ ಅನಿರ್ವೇದದ ವಿಶೇಷ ಅಗತ್ಯತೆಯ ಮಕ್ಕಳ ಕೆಂದ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ನಿರ್ದೇಶಕರಾದ ಡಾ. ಕೆ.ಟಿ. ಶ್ವೇತಾ ಅವರು ಈ ಕುರಿತು ಮಾಹಿತಿ ನೀಡಿ, ʻನೆರವಿನ ಶನಿವಾರʼ ಉಪಕ್ರಮವು 2025ರ ಮಾರ್ಚ್ 29ರಿಂದ ಪ್ರತಿ ಶನಿವಾರದಂದು ಮೋರ್ಗನ್ಸ್ ಗೇಟ್ ನಲ್ಲಿರುವ ಅನಿರ್ವೇದ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ʻನೆರವಿನ ಶನಿವಾರʼ ಉಪಕ್ರಮವು ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ಎ.ಎಸ್.ಡಿ), ಎ.ಡಿ.ಎಚ್.ಡಿ, ಕಲಿಕಾ ನ್ಯೂನತೆಗಳು, ಬೌದ್ಧಿಕ ವೈಕಲ್ಯತೆಗಳು ಮತ್ತು ಬೆಳವಣಿಗೆಗೆ ಸಂಬಂಧಿಸಿದ ಇತರ ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳಿಗೆ ಸುರಕ್ಷಿತ ಮತ್ತು ಪೋಷಣೆಗೆ ಒತ್ತು ನೀಡುವ ಪರಿಸರವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಪೋಷಕರು, ಆರೈಕೆ ಒದಗಿಸುವವರು ಮತ್ತು ಸಮುದಾಯದ ಸದಸ್ಯರು ಈ ಉಪಕ್ರಮದಲ್ಲಿ ಪಾಲ್ಗೊಳ್ಳಲು ವಿನಂತಿಸಲಾಗಿದೆ. ಪೋಷಕರ ತರಬೇತಿ ಮತ್ತು ಸಮಾನಸ್ಕಂಧ ನೆರವು ಸಹ ಈ ಮೂಲಕ ಲಭ್ಯವಿದ್ದು, ಸಹಯೋಗದಿಂದ ಕೂಡಿದ ನೆರವು ಜಾಲವನ್ನು ಈ ಮೂಲಕ ರೂಪಿಸಲಾಗುವುದು.
ಮಂಗಳೂರಿನ ವಿಶೇಷ ಅಗತ್ಯತೆಯ ಮಕ್ಕಳ ಸಬಲೀಕರಣಕ್ಕಾಗಿ ನುರಿತ ವೃತ್ತಿಪರರೊಂದಿಗೆ ಕೈಜೋಡಿಸುವುದಕ್ಕಾಗಿ ಸ್ವಯಂಸೇವಕರಾಗಿ ಸೇವೆ ನೀಡಲು ʻನೆರವಿನ ಶನಿವಾರʼ ಉಪಕ್ರಮವು ಸಮುದಾಯದ ಸದಸ್ಯರಿಗೆ ಕರೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ 9482186289 ಕ್ಕೆ ಕರೆ ಮಾಡಿರಿ ಅಥವಾ officialanirvedha@gmail.com ಗೆ ಸಂಪರ್ಕಿಸಿರಿ.
ಈ ಸಂಬಂಧ ಯಾವುದೇ ಪ್ರಶ್ನೆಗಳಿದ್ದಲ್ಲಿ ಅನಿರ್ವೇದ ಪ್ರತಿಷ್ಠಾನದ ನಿರ್ದೇಶಕರಾದ ಕೆ.ಟಿ ಶ್ವೇತಾ ಅವರನ್ನು 9902322985 ಮೂಲಕ ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು