8:38 AM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

Support Saturday | ಅನಿರ್ವೇದ ಸಂಸ್ಥೆಯಿಂದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ʻನೆರವಿನ ಶನಿವಾರʼ ಉಪಕ್ರಮಕ್ಕೆ ಚಾಲನೆ

26/03/2025, 13:16

ಮಂಗಳೂರು(reporterkarnataka.com): ನಗರದ ಮಾನಸಿಕ ಯೋಗಕ್ಷೇಮ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರೇತರ ಸಂಸ್ಥೆ ಎನಿಸಿರುವ ʻಅನಿರ್ವೇದʼವು ನಗರದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ಉಚಿತ ಮತ್ತು ಅಂತರ್ಗತ ʻನೆರವಿನ ಶನಿವಾರʼ ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ.


ಇಫ್ತಿಕಾರ್ ಆಲಿ (ಅಧ್ಯಕ್ಷರು, ಕರ್ನಾಟಕದ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್) ಅವರು ಮಂಗಳವಾರ ನಗರದಲ್ಲಿ ಅನಿರ್ವೇದದ ವಿಶೇಷ ಅಗತ್ಯತೆಯ ಮಕ್ಕಳ ಕೆಂದ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ನಿರ್ದೇಶಕರಾದ ಡಾ. ಕೆ.ಟಿ. ಶ್ವೇತಾ ಅವರು ಈ ಕುರಿತು ಮಾಹಿತಿ ನೀಡಿ, ʻನೆರವಿನ ಶನಿವಾರʼ ಉಪಕ್ರಮವು 2025ರ ಮಾರ್ಚ್ 29ರಿಂದ ಪ್ರತಿ ಶನಿವಾರದಂದು ಮೋರ್ಗನ್ಸ್ ಗೇಟ್ ನಲ್ಲಿರುವ ಅನಿರ್ವೇದ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ʻನೆರವಿನ ಶನಿವಾರʼ ಉಪಕ್ರಮವು ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ಎ.ಎಸ್.ಡಿ), ಎ.ಡಿ.ಎಚ್.ಡಿ, ಕಲಿಕಾ ನ್ಯೂನತೆಗಳು, ಬೌದ್ಧಿಕ ವೈಕಲ್ಯತೆಗಳು ಮತ್ತು ಬೆಳವಣಿಗೆಗೆ ಸಂಬಂಧಿಸಿದ ಇತರ ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳಿಗೆ ಸುರಕ್ಷಿತ ಮತ್ತು ಪೋಷಣೆಗೆ ಒತ್ತು ನೀಡುವ ಪರಿಸರವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಪೋಷಕರು, ಆರೈಕೆ ಒದಗಿಸುವವರು ಮತ್ತು ಸಮುದಾಯದ ಸದಸ್ಯರು ಈ ಉಪಕ್ರಮದಲ್ಲಿ ಪಾಲ್ಗೊಳ್ಳಲು ವಿನಂತಿಸಲಾಗಿದೆ. ಪೋಷಕರ ತರಬೇತಿ ಮತ್ತು ಸಮಾನಸ್ಕಂಧ ನೆರವು ಸಹ ಈ ಮೂಲಕ ಲಭ್ಯವಿದ್ದು, ಸಹಯೋಗದಿಂದ ಕೂಡಿದ ನೆರವು ಜಾಲವನ್ನು ಈ ಮೂಲಕ ರೂಪಿಸಲಾಗುವುದು.
ಮಂಗಳೂರಿನ ವಿಶೇಷ ಅಗತ್ಯತೆಯ ಮಕ್ಕಳ ಸಬಲೀಕರಣಕ್ಕಾಗಿ ನುರಿತ ವೃತ್ತಿಪರರೊಂದಿಗೆ ಕೈಜೋಡಿಸುವುದಕ್ಕಾಗಿ ಸ್ವಯಂಸೇವಕರಾಗಿ ಸೇವೆ ನೀಡಲು ʻನೆರವಿನ ಶನಿವಾರʼ ಉಪಕ್ರಮವು ಸಮುದಾಯದ ಸದಸ್ಯರಿಗೆ ಕರೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ 9482186289 ಕ್ಕೆ ಕರೆ ಮಾಡಿರಿ ಅಥವಾ officialanirvedha@gmail.com ಗೆ ಸಂಪರ್ಕಿಸಿರಿ.
ಈ ಸಂಬಂಧ ಯಾವುದೇ ಪ್ರಶ್ನೆಗಳಿದ್ದಲ್ಲಿ ಅನಿರ್ವೇದ ಪ್ರತಿಷ್ಠಾನದ ನಿರ್ದೇಶಕರಾದ ಕೆ.ಟಿ ಶ್ವೇತಾ ಅವರನ್ನು 9902322985 ಮೂಲಕ ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು