11:17 PM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ!

27/03/2025, 14:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹಾಗೂ ನೀರಿನ ಮೇಲ್ಮೈಯಲ್ಲಿ ತೇಲುತ್ತಿರುವ ಹೃದಯ ವಿದ್ರಾಹಕ
ದೃಶ್ಯ ಕಂಡುಬಂದಿದೆ.

*ಘಟನೆ ವಿವರ;*
ಮುಂಗಾರು ಪೂರ್ವದಲ್ಲಿ ನದಿಯಲ್ಲಿ ಹಚ್ಚಿಹಾಕಿದ ವಿಷದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
2 ಕಿ.ಮೀ. ಪ್ರದೇಶದೊಳಗೇ ಸಾವಿರಾರು ಮೀನುಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಕಿಡಿಗೇಡಿಗಳು ಮೈಲುತುತ್ತು (ನೈಸರ್ಗಿಕ ಅಥವಾ ರಾಸಾಯನಿಕ ವಿಷ) ಬಳಸಿ ಮೀನುಗಳ ಮಾರಣಹೋಮ ನಡೆಸಿದಂತೆ ಅನುಮಾನ ವ್ಯಕ್ತವಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಮೀನುಗಳನ್ನು ಕಡಿಮೆ ಖರ್ಚಿನಲ್ಲಿ ಮಾರಾಟ ಮಾಡಲು ಈ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದೆ.
*ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ:*
ಈ ನೀರು ಹಾಸನದ ಗೊರೂರು ಡ್ಯಾಂ ಸೇರುವ ಹೇಮಾವತಿ ನದಿಗೆ ಸೇರುತ್ತದೆ.


ಮಾರ್ಗಮಧ್ಯೆ ಹತ್ತಾರು ಹಳ್ಳಿಗಳ ಜನ ಕುಡಿಯುವ ನೀರಾಗಿ ಈ ನದಿಯನ್ನು ಅವಲಂಬಿಸಿದ್ದಾರೆ.
ವಿಷಯುಕ್ತ ನೀರು ಮಾನವ ಆರೋಗ್ಯಕ್ಕೂ ಅಪಾಯ ಸೃಷ್ಟಿಸಬಹುದಾದ ಕಾರಣ ಸ್ಥಳೀಯರು ಆತಂಕದಲ್ಲಿದ್ದಾರೆ.
*ಸ್ಥಳೀಯರ ಆಗ್ರಹ ಮತ್ತು ಪೊಲೀಸರು ಭದ್ರತೆ:*
ಸ್ಥಳೀಯರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಈ ರೀತಿಯ ವಿಷಪ್ರಯೋಗದ ಕೃತ್ಯಗಳು ಪುನರಾವರ್ತೆನೆಯಾಗದಂತೆ ಕಾನೂನು ಕ್ರಮ ವಹಿಸುವಂತೆ ಜನತೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು