12:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ!

27/03/2025, 14:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹಾಗೂ ನೀರಿನ ಮೇಲ್ಮೈಯಲ್ಲಿ ತೇಲುತ್ತಿರುವ ಹೃದಯ ವಿದ್ರಾಹಕ
ದೃಶ್ಯ ಕಂಡುಬಂದಿದೆ.

*ಘಟನೆ ವಿವರ;*
ಮುಂಗಾರು ಪೂರ್ವದಲ್ಲಿ ನದಿಯಲ್ಲಿ ಹಚ್ಚಿಹಾಕಿದ ವಿಷದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
2 ಕಿ.ಮೀ. ಪ್ರದೇಶದೊಳಗೇ ಸಾವಿರಾರು ಮೀನುಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಕಿಡಿಗೇಡಿಗಳು ಮೈಲುತುತ್ತು (ನೈಸರ್ಗಿಕ ಅಥವಾ ರಾಸಾಯನಿಕ ವಿಷ) ಬಳಸಿ ಮೀನುಗಳ ಮಾರಣಹೋಮ ನಡೆಸಿದಂತೆ ಅನುಮಾನ ವ್ಯಕ್ತವಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಮೀನುಗಳನ್ನು ಕಡಿಮೆ ಖರ್ಚಿನಲ್ಲಿ ಮಾರಾಟ ಮಾಡಲು ಈ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದೆ.
*ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ:*
ಈ ನೀರು ಹಾಸನದ ಗೊರೂರು ಡ್ಯಾಂ ಸೇರುವ ಹೇಮಾವತಿ ನದಿಗೆ ಸೇರುತ್ತದೆ.


ಮಾರ್ಗಮಧ್ಯೆ ಹತ್ತಾರು ಹಳ್ಳಿಗಳ ಜನ ಕುಡಿಯುವ ನೀರಾಗಿ ಈ ನದಿಯನ್ನು ಅವಲಂಬಿಸಿದ್ದಾರೆ.
ವಿಷಯುಕ್ತ ನೀರು ಮಾನವ ಆರೋಗ್ಯಕ್ಕೂ ಅಪಾಯ ಸೃಷ್ಟಿಸಬಹುದಾದ ಕಾರಣ ಸ್ಥಳೀಯರು ಆತಂಕದಲ್ಲಿದ್ದಾರೆ.
*ಸ್ಥಳೀಯರ ಆಗ್ರಹ ಮತ್ತು ಪೊಲೀಸರು ಭದ್ರತೆ:*
ಸ್ಥಳೀಯರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಈ ರೀತಿಯ ವಿಷಪ್ರಯೋಗದ ಕೃತ್ಯಗಳು ಪುನರಾವರ್ತೆನೆಯಾಗದಂತೆ ಕಾನೂನು ಕ್ರಮ ವಹಿಸುವಂತೆ ಜನತೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು