2:45 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ!

27/03/2025, 14:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹಾಗೂ ನೀರಿನ ಮೇಲ್ಮೈಯಲ್ಲಿ ತೇಲುತ್ತಿರುವ ಹೃದಯ ವಿದ್ರಾಹಕ
ದೃಶ್ಯ ಕಂಡುಬಂದಿದೆ.

*ಘಟನೆ ವಿವರ;*
ಮುಂಗಾರು ಪೂರ್ವದಲ್ಲಿ ನದಿಯಲ್ಲಿ ಹಚ್ಚಿಹಾಕಿದ ವಿಷದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
2 ಕಿ.ಮೀ. ಪ್ರದೇಶದೊಳಗೇ ಸಾವಿರಾರು ಮೀನುಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಕಿಡಿಗೇಡಿಗಳು ಮೈಲುತುತ್ತು (ನೈಸರ್ಗಿಕ ಅಥವಾ ರಾಸಾಯನಿಕ ವಿಷ) ಬಳಸಿ ಮೀನುಗಳ ಮಾರಣಹೋಮ ನಡೆಸಿದಂತೆ ಅನುಮಾನ ವ್ಯಕ್ತವಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಮೀನುಗಳನ್ನು ಕಡಿಮೆ ಖರ್ಚಿನಲ್ಲಿ ಮಾರಾಟ ಮಾಡಲು ಈ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದೆ.
*ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ:*
ಈ ನೀರು ಹಾಸನದ ಗೊರೂರು ಡ್ಯಾಂ ಸೇರುವ ಹೇಮಾವತಿ ನದಿಗೆ ಸೇರುತ್ತದೆ.


ಮಾರ್ಗಮಧ್ಯೆ ಹತ್ತಾರು ಹಳ್ಳಿಗಳ ಜನ ಕುಡಿಯುವ ನೀರಾಗಿ ಈ ನದಿಯನ್ನು ಅವಲಂಬಿಸಿದ್ದಾರೆ.
ವಿಷಯುಕ್ತ ನೀರು ಮಾನವ ಆರೋಗ್ಯಕ್ಕೂ ಅಪಾಯ ಸೃಷ್ಟಿಸಬಹುದಾದ ಕಾರಣ ಸ್ಥಳೀಯರು ಆತಂಕದಲ್ಲಿದ್ದಾರೆ.
*ಸ್ಥಳೀಯರ ಆಗ್ರಹ ಮತ್ತು ಪೊಲೀಸರು ಭದ್ರತೆ:*
ಸ್ಥಳೀಯರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಈ ರೀತಿಯ ವಿಷಪ್ರಯೋಗದ ಕೃತ್ಯಗಳು ಪುನರಾವರ್ತೆನೆಯಾಗದಂತೆ ಕಾನೂನು ಕ್ರಮ ವಹಿಸುವಂತೆ ಜನತೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು