1:40 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ!

27/03/2025, 14:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹಾಗೂ ನೀರಿನ ಮೇಲ್ಮೈಯಲ್ಲಿ ತೇಲುತ್ತಿರುವ ಹೃದಯ ವಿದ್ರಾಹಕ
ದೃಶ್ಯ ಕಂಡುಬಂದಿದೆ.

*ಘಟನೆ ವಿವರ;*
ಮುಂಗಾರು ಪೂರ್ವದಲ್ಲಿ ನದಿಯಲ್ಲಿ ಹಚ್ಚಿಹಾಕಿದ ವಿಷದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
2 ಕಿ.ಮೀ. ಪ್ರದೇಶದೊಳಗೇ ಸಾವಿರಾರು ಮೀನುಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಕಿಡಿಗೇಡಿಗಳು ಮೈಲುತುತ್ತು (ನೈಸರ್ಗಿಕ ಅಥವಾ ರಾಸಾಯನಿಕ ವಿಷ) ಬಳಸಿ ಮೀನುಗಳ ಮಾರಣಹೋಮ ನಡೆಸಿದಂತೆ ಅನುಮಾನ ವ್ಯಕ್ತವಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಮೀನುಗಳನ್ನು ಕಡಿಮೆ ಖರ್ಚಿನಲ್ಲಿ ಮಾರಾಟ ಮಾಡಲು ಈ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದೆ.
*ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ:*
ಈ ನೀರು ಹಾಸನದ ಗೊರೂರು ಡ್ಯಾಂ ಸೇರುವ ಹೇಮಾವತಿ ನದಿಗೆ ಸೇರುತ್ತದೆ.


ಮಾರ್ಗಮಧ್ಯೆ ಹತ್ತಾರು ಹಳ್ಳಿಗಳ ಜನ ಕುಡಿಯುವ ನೀರಾಗಿ ಈ ನದಿಯನ್ನು ಅವಲಂಬಿಸಿದ್ದಾರೆ.
ವಿಷಯುಕ್ತ ನೀರು ಮಾನವ ಆರೋಗ್ಯಕ್ಕೂ ಅಪಾಯ ಸೃಷ್ಟಿಸಬಹುದಾದ ಕಾರಣ ಸ್ಥಳೀಯರು ಆತಂಕದಲ್ಲಿದ್ದಾರೆ.
*ಸ್ಥಳೀಯರ ಆಗ್ರಹ ಮತ್ತು ಪೊಲೀಸರು ಭದ್ರತೆ:*
ಸ್ಥಳೀಯರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಈ ರೀತಿಯ ವಿಷಪ್ರಯೋಗದ ಕೃತ್ಯಗಳು ಪುನರಾವರ್ತೆನೆಯಾಗದಂತೆ ಕಾನೂನು ಕ್ರಮ ವಹಿಸುವಂತೆ ಜನತೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು