7:14 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ!

27/03/2025, 14:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹಾಗೂ ನೀರಿನ ಮೇಲ್ಮೈಯಲ್ಲಿ ತೇಲುತ್ತಿರುವ ಹೃದಯ ವಿದ್ರಾಹಕ
ದೃಶ್ಯ ಕಂಡುಬಂದಿದೆ.

*ಘಟನೆ ವಿವರ;*
ಮುಂಗಾರು ಪೂರ್ವದಲ್ಲಿ ನದಿಯಲ್ಲಿ ಹಚ್ಚಿಹಾಕಿದ ವಿಷದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
2 ಕಿ.ಮೀ. ಪ್ರದೇಶದೊಳಗೇ ಸಾವಿರಾರು ಮೀನುಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಕಿಡಿಗೇಡಿಗಳು ಮೈಲುತುತ್ತು (ನೈಸರ್ಗಿಕ ಅಥವಾ ರಾಸಾಯನಿಕ ವಿಷ) ಬಳಸಿ ಮೀನುಗಳ ಮಾರಣಹೋಮ ನಡೆಸಿದಂತೆ ಅನುಮಾನ ವ್ಯಕ್ತವಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಮೀನುಗಳನ್ನು ಕಡಿಮೆ ಖರ್ಚಿನಲ್ಲಿ ಮಾರಾಟ ಮಾಡಲು ಈ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದೆ.
*ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ:*
ಈ ನೀರು ಹಾಸನದ ಗೊರೂರು ಡ್ಯಾಂ ಸೇರುವ ಹೇಮಾವತಿ ನದಿಗೆ ಸೇರುತ್ತದೆ.


ಮಾರ್ಗಮಧ್ಯೆ ಹತ್ತಾರು ಹಳ್ಳಿಗಳ ಜನ ಕುಡಿಯುವ ನೀರಾಗಿ ಈ ನದಿಯನ್ನು ಅವಲಂಬಿಸಿದ್ದಾರೆ.
ವಿಷಯುಕ್ತ ನೀರು ಮಾನವ ಆರೋಗ್ಯಕ್ಕೂ ಅಪಾಯ ಸೃಷ್ಟಿಸಬಹುದಾದ ಕಾರಣ ಸ್ಥಳೀಯರು ಆತಂಕದಲ್ಲಿದ್ದಾರೆ.
*ಸ್ಥಳೀಯರ ಆಗ್ರಹ ಮತ್ತು ಪೊಲೀಸರು ಭದ್ರತೆ:*
ಸ್ಥಳೀಯರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಈ ರೀತಿಯ ವಿಷಪ್ರಯೋಗದ ಕೃತ್ಯಗಳು ಪುನರಾವರ್ತೆನೆಯಾಗದಂತೆ ಕಾನೂನು ಕ್ರಮ ವಹಿಸುವಂತೆ ಜನತೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು