3:04 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ ವಿರುದ್ಧ ದೆಹಲಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

27/03/2025, 18:07

ನವದೆಹಲಿ(reporterkarnataka.com): ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಜಿ ಅವರ ನೇತೃತ್ವದಲ್ಲಿ, ದೆಹಲಿಯಲ್ಲಿ ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ ಎಂಬ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು. ದೆಹಲಿಯ ಬೀದಿಗಳಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಿದ ಹಾಗೂ ಕನ್ನಡ ಬಾವುಟಗಳು ಹಿಡಿದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ರವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉದ್ಯೋಗ ಕೊಡಿ, ನಿಮ್ಮ ವ್ಯರ್ಥ ಭಾಷಣಗಳು ಬೇಡ ಇಲ್ಲವಾದರೆ ಸಂಸತ್ತಿಗೆ ಮುತ್ತಿಗೆ ಹಾಕುತ್ತೇವೆಂದು ಯುವ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಧ್ವನಿ ಮೊಳಗಿಸಿದರು.


ಕೇಂದ್ರದಲ್ಲಿ ಕುಳಿತಿರುವ ಯುವ ವಿರೋಧಿ ಮೋದಿ ಸರ್ಕಾರದ ವಿರುದ್ಧ ನ್ಯಾಯಕ್ಕಾಗಿ ಈ ಹೋರಾಟ ನ್ಯಾಯ ಸಿಗುವವರೆಗೂ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲೆಯಿಂದ ಪ್ರತಿಭಟನೆಗೆ ತೆರಳಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜನ್ ಬ್ಯಾರಿಗೇಟ್ ಹತ್ತಿ ಪ್ರತಿಭಟಿಸಿ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು