5:07 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

Air India Express | ಮಂಗಳೂರಿನಿಂದ ಹೈದರಾಬಾದ್, ಚೆನ್ನೈಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್: ಏ. 2 ಮತ್ತು 5ರಿಂದ ಹಾರಾಟ ಶುರು

27/03/2025, 19:25

ಮಂಗಳೂರು(reporterkarnataka.com): ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ (ಬುಧವಾರ) ಮತ್ತು ಚೆನ್ನೈಗೆ (ಶನಿವಾರ) ವಿಮಾನ ಯಾನ ಆರಂಭಿಸಲಿದೆ. ಏಪ್ರಿಲ್ 2 ಮತ್ತು ಏಪ್ರಿಲ್ 5 ರಿಂದ ಹಾರಾಟ ಶುರುವಾಗುತ್ತದೆ.
IX 2915 ವಿಮಾನ ಮಂಗಳೂರಿನಿಂದ ಬೆಳಗ್ಗೆ 6.10ಕ್ಕೆ ಹೊರಟು 8 ಗಂಟೆಗೆ ಹೈದರಾಬಾದ್ ತಲುಪಲಿದೆ. IX 2913 ವಿಮಾನವು ಹೈದರಾಬಾದ್‌ನಿಂದ ಸಂಜೆ 5.25 ಕ್ಕೆ ಹೊರಟು 7.15 ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೇ, IX 2917 ವಿಮಾನವು ಮಂಗಳೂರಿನಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 3.40 ಕ್ಕೆ ಚೆನ್ನೈ ತಲುಪಲಿದೆ. ಹಿಂದಿರುಗುವ ವಿಮಾನ, IX 2918 ಚೆನ್ನೈನಿಂದ ಸಂಜೆ 4.20 ಕ್ಕೆ ಹೊರಟು 6 ಗಂಟೆಗೆ ಮಂಗಳೂರನ್ನು ತಲುಪುತ್ತದೆ.
ವಿಮಾನಯಾನ ಸಂಸ್ಥೆಯು ಈ ಎರಡೂ ಮಾರ್ಗಗಳಲ್ಲಿ 186 ಆಸನಗಳ ಬೋಯಿಂಗ್ 737-800 NG ವಿಮಾನವನ್ನು ನಿಯೋಜಿಸಲಿದೆ. ಪ್ರಸ್ತುತ, ಇಂಡಿಗೋ ಈ ಎರಡು ರಾಜಧಾನಿ ಮಾರ್ಗಗಳಿಗೆ 78 ಆಸನಗಳ ATR ವಿಮಾನಗಳ ಸಂಚಾರ ನಡೆಸುತ್ತಿದೆ. ಇಂಡಿಗೋ ಹೈದರಾಬಾದ್‌ಗೆ ಪ್ರತಿದಿನ ಎರಡು ಮತ್ತು ಮೂರು ವಾರಕ್ಕೊಮ್ಮೆ ಮತ್ತು ಚೆನ್ನೈಗೆ ಎರಡು ದೈನಂದಿನ ವಿಮಾನಗಳ ಯಾನ ನಡೆಸುತ್ತಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಈ ಎರಡೂ ಹೊಸ ಮಾರ್ಗಗಳಿಗೆ ಬುಕಿಂಗ್ ಅನ್ನು ತೆರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು