12:02 PM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿ ದ್ವಿತೀಯ ಆಂತರಿಕ ಆನ್‌ಲೈನ್‌ ಪರೀಕ್ಷೆ

28/03/2025, 20:15

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆಯನ್ನು ಪಡೆದ ಬಳಿಕ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ದ್ವಿತೀಯ ಆಂತರಿಕ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಲಾಯಿತು.

ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಹಾಗೂ ಸಮಗ್ರತೆಗಳನ್ನು ಕಾಪಾಡಿಕೊಳ್ಳಲು ಆನ್‌ಲೈನ್‌ ಪರೀಕ್ಷೆಗಳಿಗೆ ಕಾಲೇಜು ಬಳಸುವ ಸಾಫ್ಟ್‌ವೇರ್ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಯಾವುದೇ ಇತರ ವೆಬ್‌ಸೈಟ್‌ಗಳನ್ನು ಪ್ರವೇಶಿಸುವುದನ್ನು ಅಥವಾ ಯಾವುದೇ ರೀತಿಯ ಅವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸುವ ಮೂಲಕ ಸುರಕ್ಷಿತ ಪರೀಕ್ಷಾ ವಾತಾವರಣವನ್ನು ಖಾತ್ರಿಗೊಳಿಸುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ತಮ್ಮ ಕಂಪ್ಯೂಟರ್‌ನ ವೆಬ್‌ ಕ್ಯಾಮರಾವನ್ನು ಚಾಲ್ತಿಯಲ್ಲಿರಿಬೇಕಾಗಿದ್ದು ಚಲನವಲನಗಳು ಮತ್ತು ಸಂವಹನಗಳನ್ನು ಮೇಲ್ವಿಚಾರಣೆ ಮಾಡಲಾಯಿತು. ಪರೀಕ್ಷೆಯ ಉತ್ತರಗಳನ್ನು ಸಲ್ಲಿಸಿದ ತಕ್ಷಣವೇ ಮೌಲ್ಯಮಾಪನವನ್ನು ಮಾಡಿ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ಪ್ರಕಟಿಸಲಾಯಿತು.
“ಸ್ವಾಯತ್ತತೆಯನ್ನು ಪಡೆದ ಬಳಿಕ ಕಾಲೇಜನಲ್ಲಿ ಹಲವು ನೂತನ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕಾಲೇಜು ಈಗಾಗಲೇ ಬೋಧನೆ ಹಾಗೂ ಅದಕ್ಕೆ ಸಂಬಂಧಿಸಿದ ಇತರ ವಿಷಯಗಳಿಗೆ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಆನ್‌ಲೈನ್‌ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಕಾಲೇಜು ಆಧುನಿಕ ಶೈಲಿಯ ಮೌಲ್ಯಮಾಪನವನ್ನು ಅಳವಡಿಸಿಕೊಳ್ಳುತ್ತಿದೆ. ಇದು ಕಾಲೇಜಿನ ನಾವೀನ್ಯತೆಯನ್ನು ಪೋಷಿಸುವ ದೃಷ್ಠಿಕೋನಕ್ಕೆ ಸಾಕ್ಷಿಯಾಗಿದೆ. ಇಂದು ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರೀಕ್ಷೆಗಳನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಸ್ವಾಯತ್ತ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ದ್ವಿತೀಯ ಆಂತರಿಕ ಮೌಲ್ಯಮಾಪನ ಪರೀಕ್ಷೆಗಳನ್ನು ಆನ್‌ಲೈನ್‌ ಮುಖಾಂತರ ನಡೆಸಲಾಗುವುದು. ಈ ಉಪಕ್ರಮವು ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ನಮ್ಮ ಬದ್ಧತೆಗೆ ಹಿಡಿದ ಕೈಕನ್ನಡಿಯಾಗಿ ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕ ಮೌಲ್ಯಮಾಪನ ಪದ್ಧತಿಗಳ ಕಡೆಗೆ ನಮ್ಮ ಸುಗಮ ಪರಿವರ್ತನೆಯನ್ನು ಖಾತರಿಪಡಿಸುತ್ತದೆ. ನೈಜ-ಸಮಯದ ಮೌಲ್ಯಮಾಪನ ಮತ್ತು ತಕ್ಷಣದ ಫಲಿತಾಂಶ ಪ್ರಕಟಣೆಯನ್ನು ಬಳಸಿಕೊಳ್ಳುವ ಮೂಲಕ ನಾವು ಕಲಿಕಾನುಭವವನ್ನು ಹೆಚ್ಚಿಸಿದ್ದೇವೆ ಎಂದು ಹೇಳಲು ಸಂತಸವೆನಿಸುತ್ತಿದೆ. ಪರೀಕ್ಷಾಂಗ ಕುಲಸಚಿವರಾದ ಡಾ| ವಿನಯಚಂದ್ರ ಅವರ ಕ್ರಿಯಾಶೀಲತೆ, ಶೈಕ್ಷಣಿಕ ಶ್ರೇಷ್ಠತೆಯ ದೃಷ್ಟಿಕೋನ ಮತ್ತು ಬದ್ಧತೆಯು ಈ ಉಪಕ್ರಮವನ್ನು ಮುಂದಕ್ಕೆ ಕೊಂಡೊಯ್ದಿದೆ. ಆನ್‌ಲೈನ್ ಪರೀಕ್ಷಾ ಪ್ರಕ್ರಿಯೆಯ ಸುಗಮ ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ನಿಖರವಾದ ಯೋಜನೆ ಮತ್ತು ಸಮರ್ಪಿತ ಪ್ರಯತ್ನಗಳಿಗಾಗಿ ಪರೀಕ್ಷಾಂಗ ಉಪ ಕುಲಸಚಿವರಾದ ಜಾನ್ಸನ್ ಡೆವಿಡ್ ಸಿಕ್ವೇರಾ ಹಾಗೂ ಅಭಿಷೇಕ್ ಸುವರ್ಣ ಅವರಿಗೆ ಅಭಿನಂದನೆಗಳು. ಇವರುಗಳ ಸಂಘಟಿತ ಪ್ರಯತ್ನವು ನಮ್ಮ ಮೌಲ್ಯಮಾಪನ ವಿಧಾನಗಳಲ್ಲಿ ನಾವೀನ್ಯತೆಗಳಿಗೆ ಭದ್ರವಾದ ಅಡಿಪಾಯವನ್ನು ಹಾಕಿದೆ. ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳುವಂತಹ ಹಲವಾರು ಯೋಜನೆಗಳನ್ನು ಅಳವಡಿಸಿಕೊಳ್ಳಲಾಗುವುದು. ನಾವು ಕೈಗೊಂಡ ಎಲ್ಲಾ ಕಾರ್ಯಗಳಿಗೂ ಮಾರ್ಗದರ್ಶನ ನೀಡುತ್ತಿರುವ ಸಂಚಾಲಕರು ಹಾಗೂ ಆಡಳಿತ ಮಂಡಳಿಯವರಿಗೆ ಕೃತಜ್ಞತೆಗಳು ಎಂದು ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು