8:56 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು