4:40 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Mangaluru | ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ ನಾಮಫಲಕ ಶಾಸಕ ವೇದವ್ಯಾಸ ಕಾಮತ್ ಅನಾವರಣ

31/03/2025, 14:26

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು.

ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆಯಿಂದ, ಎ ಬಿ. ಶೆಟ್ಟಿ ವೃತ್ತದಿಂದ, ಮಂಕಿಸ್ಮಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆ ಇದಾಗಿದ್ದು “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂದು ನಾಮಕರಣವಾಗಿದೆ.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್ ಭಾನುಮತಿ, ಶೈಲೇಶ್ ಶೆಟ್ಟಿ, ಭರತ್ ಕುಮಾರ್, ಲತೀಫ್ ಕಂದುಕ, ರೇವತಿ ಶ್ಯಾಮ್ ಸುಂದರ್ ಶೆಟ್ಟಿ, ನಿತಿನ್ ಕುಮಾರ್, ಭಾಸ್ಕರ ಚಂದ್ರ ಶೆಟ್ಟಿ ಸೇರಿದಂತೆ ಅನೇಕ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು