2:32 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು