1:40 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು