3:35 PM Friday26 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು