4:37 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜನರ ರಕ್ತ ಹೀರುವ ದರ ಬೀಜಾಸುರ ಸರಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

01/04/2025, 15:32

*ಕಸದ ಮೇಲೆಯೂ ಸೆಸ್; ಕೇಂದ್ರ ಸಚಿವರ ಆಕ್ರೋಶ*

ನವದೆಹಲಿ/ಬೆಂಗಳೂರು(reporterkarnataka.com: ರಾಜ್ಯದಲ್ಲಿ ‘ದರ ಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ! ಜನರ ರಕ್ತ ಹೀರುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದರ ಏರಿಕೆಗೆ ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ: ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.
ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನಹೀರುವ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ಗುರುತರ ಆರೋಪ ಮಾಡಿರುವ ಅವರು; ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರಕಾರ ಎಂದು ದೂರಿದ್ದಾರೆ.
ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ (Garbage Cess) ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದಿರುವ ಸಚಿವರು; ಸರಕಾರವನ್ನು ದರ ಬೀಜಾಸುರ ಸರಕಾರ ಎಂದು ಕರೆದಿದ್ದಾರೆ ಹಾಗೂ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್, ಕಾಂಗ್ರೆಸ್ ಕಂಪನಿ ಸರಕಾರ ಎಂದು ಮೂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು