10:27 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ ಶರೀರ ಇಟ್ಟು ಪ್ರತಿಭಟನೆ

01/04/2025, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಲ ಮರು ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ
ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆನ್ನಲಾದ ತರೀಕೆರೆ ತಾಲೂಕಿನ

ಹುಣಸಘಟ್ಟ ಗ್ರಾಮದ ರೈತ ಮಂಜಾ ನಾಯ್ಕ್ (45) ಅವರ ಪಾರ್ಥಿವ ಶರೀರವನ್ನು ಬ್ಯಾಂಕ್ ಮುಂಭಾಗದಲ್ಲಿಟ್ಟು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಬ್ಯಾಂಕ್ ಮುಂದೆ ಆ್ಯಂಬ್ಯುಲೆನ್ಸ್ ನಿಲ್ಲಿಸಿ ಕುಟುಂಬಸ್ಥರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಬ್ಯಾಂಕ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಜ್ಜಂಪುರ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳಕ್ಕೆ ನಿನ್ನೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಜಾ ನಾಯ್ಕ್ ಅವರು ಯೂನಿಯನ್ ಬ್ಯಾಂಕಿನಲ್ಲಿ 4.70 ಲಕ್ಷ ಸಾಲ ಮಾಡಿದ್ದರು.
ಸಾಲ ಮರು ಪಾವತಿಗಾಗಿ ಬ್ಯಾಂಕ್ ಸಿಬ್ಬಂದಿಗಳು
ಸಾರ್ವಜನಿಕ ಪ್ರದೇಶದಲ್ಲಿ ಕಿರುಕುಳ ನೀಡಿದ್ದಾರೆ ಎಂದು
ಆರೋಪಿಸಲಾಗಿದೆ.
ಪೊಲೀಸರ ಮನವೊಲಿಕೆ ಬಳಿಕ ಗ್ರಾಮಸ್ಥರು ಬ್ಯಾಂಕ್ ಎದುರುಗಡೆಯಿಂದ ಮೃತದೇಹವನ್ನು ತೆರವುಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು