6:09 AM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ ವಿರೋಧಿಸುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

02/04/2025, 14:34

ನವದೆಹಲಿ(reporterkarnataka.com): ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಬಿಲ್ 1950ರ ದಶಕದಲ್ಲಿ ಬಂದಿದ್ದು. 1990 ಹಾಗೂ 2013 ರಲ್ಲಿ ತಿದ್ದುಪಡಿಯಾಗಿದೆ. ಈಗ ತಿದ್ದುಪಡಿ ಮಾಡುತ್ತಿರುವುದೇನು ಹೊಸದೇನಲ್ಲ. 2013ಕ್ಕಿಂತ ಮುಂಚೆ ಕೇಂದ್ರದ ಮಾಜಿ ಸಚಿವ ಕೆ. ರೆಹಮಾನ್ ಖಾನ್ ಸಮಿತಿ ಕೆಲವು ಶೀಫಾರಸು ಮಾಡಿತ್ತು. ಅವುಗಳಲ್ಲಿ ಆಗಿನ ಯುಪಿಎ ಸರ್ಕಾರ ಕೆಲವೇ ಕೆಲವು ಅಂಶಗಳನ್ನು ತಿದ್ದುಪಡಿ ಮಾಡಿ ಕೆಲವು ಅಂಶಗಳನ್ನು ಹಾಗೇ ಬಿಟ್ಟಿತ್ತು. ಮುಖ್ಯವಾಗಿ ದೇಶದ ಕಾನೂನು ಬಹಳ ದೊಡ್ಡದು, ಸಂವಿಧಾನ ದೊಡ್ಡದು. 1990 ಹಾಗೂ 2013ರ ಕಾಯ್ದೆಯಲ್ಲಿ ಎಲ್ಲ ಕಾನೂನಿಗಿಂತ ವಕ್ಫ್ ದೊಡ್ಡದು ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ಕೂಡ ಇದರಲ್ಲಿ ಮಧ್ಯಸ್ಥಿಕೆ ವಹಿಸದಂತೆ ಮಾಡಲಾಗಿದೆ. ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೊಂದು ಇದರಲ್ಲಿ ಸಾಕಷ್ಟು ವ್ಯಾಜ್ಯಗಳಿವೆ. ಮುಸಲ್ಮಾನರ ಆಸ್ತಿಯೇ ವಕ್ಫ್ ಗೆ ಹೋಗಿದೆ. ವಕ್ಫ್ ಆಸ್ತಿಯೇ ಕಾಂಗ್ರೆಸ್ ನಾಯಕರ ಕೈಗೆ ಹೋಗಿದೆ. ಕರ್ನಾಟಕದಲ್ಲಿ ವಕ್ಪ್ ಆಸ್ತಿ ಕಾಂಗ್ರೆಸ್ ನಾಯಕರ ಕೈಯಲ್ಲಿರುವ ಬಗ್ಗೆ ದೊಡ್ಡ ವರದಿಯೇ ಇದೆ. ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ವಕ್ಫ್ ಆಸ್ತಿ ಎಂದು ಮಾಡಲಾಗಿದೆ. ಸರ್ಕಾರದ ಆಸ್ತಿ ವಕ್ಪ್ ಆಸ್ತಿ ಎನ್ನಲಾಗಿದೆ. ಬೇರೆ ಎಲ್ಲಾ ಸಮುದಾಯಗಳಿಗೆ ಕಂದಾಯ ಕಾಯ್ದೆಯೇ ಸುಪ್ರೀಂ ಆಗಿದೆ. ಆದರೆ, ವಕ್ಪ್ ಗೆ ಮಾತ್ರ ಅನ್ವಯ ಆಗುವುದಿಲ್ಲ. ಕಂದಾಯ ಕಾಯ್ದೆಯೇ ಸುಪ್ರೀಂ ಆಗಬೇಕು. ಅದನ್ನು ಸರಿಪಡಿಸಲು ಜಂಟಿ ಸದನ ಸಮಿತಿ ಸಾಕಷ್ಟು ಚರ್ಚೆ ಮಾಡಿದೆ. ದೇಶಾದ್ಯಂತ ತಿರುಗಾಡಿ ಅಭಿಪ್ರಾಯ ಪಡೆದಿದೆ. ಮುಸ್ಲಿಂ ಸೇರಿದಂತೆ ಹಲವಾರು ಸಮುದಾಯಗಳು, ಕ್ರಿಶ್ಚಿಯನ್ನರೂ, ಅಜೀರ್ ದರ್ಗಾದವರು ಇದನ್ನು ಸ್ವಾಗತ ಮಾಡಿದ್ದಾರೆ. ಈ ಬಗ್ಗೆ ಚರ್ಚೆಯಾಗಲಿ’ ಎಂದರು.
ಯಾವುದೇ ವ್ಯಾಜ್ಯ ಇಲ್ಲದ ವಕ್ಫ್ ಆಸ್ತಿ ವಕ್ಫ್ ಆಸ್ತಿಯಾಗಿಯೇ ಉಳಿಯಲಿದೆ. ದೇಶದ ಕಾನೂನು ಏನಿದೆ ಅದರ ಅನುಗುಣವಾಗಿ ತಿದ್ದುಪಡಿ ಮಾಡಲಾಗಿದೆ. ಸತ್ಯ ಹೇಳಬೇಕೆಂದರೆ ಇಡೀ ದೇಶದ ತುಂಬ ವಕ್ಸ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಮುಸ್ಲಿಮ್ ಮಂಡಳಿಯಲ್ಲಿ ಹಿಂದುಗಳನ್ನು ಸದಸ್ಯರನ್ನಾಗಿ ಮಾಡಿರುವ ಬಗ್ಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರಾವಳಿ ಭಾಗದಲ್ಲಿ ಮುಜರಾಯಿ ಇಲಾಖೆಯ ಅನೇಕ ದೇವಸ್ಥಾನಗಳಲ್ಲಿ ಮುಸ್ಲಿಮರೇ ಆಡಳಿತಾಧಿಕಾರಿಗಳಾಗಿದ್ದರು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು