5:20 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Rajarajeshwari Temple | ಏ.6ರಂದು ಅಮ್ಮನೆಡೆಗೆ ನಮ್ಮ ನಡಿಗೆ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ

02/04/2025, 22:46

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್‌ 6ರಂದು ಬೆಳಿಗ್ಗೆ 5.30ಕ್ಕೆ‌ ಏಕಕಾಲದಲ್ಲಿ ಬಿ.ಸಿ. ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಮತ್ತು ಗುರುಪುರ ಕೈಕಂಬದಿಂದ ಆರಂಭಗೊಂಡು 9 ಗಂಟೆಗೆ ಪೊಳಲಿಯಲ್ಲಿ ಸಂಗಮವಾಗಲಿದೆ ಎಂದು ವಿಹಿಪ ಬಂಟ್ವಾಳ ಪ್ರಖಂಡ ಅಧ್ಯಕ್ಷ, ನ್ಯಾಯವಾದಿ ಪ್ರಸಾದ ಕುಮಾರ್ ರೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ಶ್ರೀ ರಾಜರಾಜೇಶ್ವರಿ ದೇಗುಲವು ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ಎ ಗ್ರೇಡ್ ಮಾನ್ಯತೆ ಹೊಂದಿದೆ. ವಾರ್ಷಿಕ ವಾಗಿ ಸುಮಾರು ರೂ.8 ಕೋಟಿಗಳಷ್ಟು ಆದಾಯವಿದೆ. ದೇವಸ್ಥಾನದ ಆದಾಯವು ದೇವಾಲಯದ ಭಕ್ತ ಜನರಿಗೆ ವಿನಿಯೋಗವಾಗಬೇಕು ಎಂಬ ಬೇಡಿಕೆಯ ಮನವಿಯನ್ನು ದೇವಾಲಯದ ಆಡಳಿತ ಮಂಡಳಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ದೇವಾಲಯಕ್ಕೆ ಬರುವ ಭಕ್ತರಿಗೆ ಹಿಂದು ಸಂಸ್ಕೃತಿಗೆ ಪೂರಕವಾದ ವಸ್ತ್ರ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಸುಸಜ್ಜಿತ ಗೋಶಾಲೆ ನಿರ್ಮಾಣ ಮತ್ತು ನಿರ್ವಹಣೆ ಮಾಡಬೇಕು. ಬಾಲಸಂಸ್ಕಾರ ಕೇಂದ್ರ ತೆರೆದು ಧಾರ್ಮಿಕ ಶಿಕ್ಶಣ ನೀಡುವ ವ್ಯವಸ್ಥೆ ಮಾಡಬೇಕು.ಉಚಿತ ಸಾಮೂಹಿಕ ವಿವಾಹ, ಉತ್ಸವಗಳ ಸಂದರ್ಭದಲ್ಲಿ ರಾತ್ರಿ ಭೋಜನ ವ್ಯವಸ್ಥೆ ಮಾಡಬೇಕು. ದೇವಸ್ಥಾನದ ಪರಿಸರದಲ್ಲಿ ವ್ಯಾಪಾರ ಇತ್ಯಾದಿಗಳಿಗೆ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಹಿಪಂ, ಭಜರಂಗ ದಳ ಪದಾಧಿಕಾರಿಗಳಾದ ಕ.ಕೃಷ್ಣಪ್ಪ, ಭರತ್ ಕುಮ್ಡೇಲು, ರಾಜೇಶ ಗಂಜಿಮಠ, ಸಂತೋಷ ಸರಪಾಡಿ, ಕೇಶವ ದೈಪಲ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು