10:47 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Rajarajeshwari Temple | ಏ.6ರಂದು ಅಮ್ಮನೆಡೆಗೆ ನಮ್ಮ ನಡಿಗೆ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ

02/04/2025, 22:46

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್‌ 6ರಂದು ಬೆಳಿಗ್ಗೆ 5.30ಕ್ಕೆ‌ ಏಕಕಾಲದಲ್ಲಿ ಬಿ.ಸಿ. ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಮತ್ತು ಗುರುಪುರ ಕೈಕಂಬದಿಂದ ಆರಂಭಗೊಂಡು 9 ಗಂಟೆಗೆ ಪೊಳಲಿಯಲ್ಲಿ ಸಂಗಮವಾಗಲಿದೆ ಎಂದು ವಿಹಿಪ ಬಂಟ್ವಾಳ ಪ್ರಖಂಡ ಅಧ್ಯಕ್ಷ, ನ್ಯಾಯವಾದಿ ಪ್ರಸಾದ ಕುಮಾರ್ ರೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ಶ್ರೀ ರಾಜರಾಜೇಶ್ವರಿ ದೇಗುಲವು ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ಎ ಗ್ರೇಡ್ ಮಾನ್ಯತೆ ಹೊಂದಿದೆ. ವಾರ್ಷಿಕ ವಾಗಿ ಸುಮಾರು ರೂ.8 ಕೋಟಿಗಳಷ್ಟು ಆದಾಯವಿದೆ. ದೇವಸ್ಥಾನದ ಆದಾಯವು ದೇವಾಲಯದ ಭಕ್ತ ಜನರಿಗೆ ವಿನಿಯೋಗವಾಗಬೇಕು ಎಂಬ ಬೇಡಿಕೆಯ ಮನವಿಯನ್ನು ದೇವಾಲಯದ ಆಡಳಿತ ಮಂಡಳಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ದೇವಾಲಯಕ್ಕೆ ಬರುವ ಭಕ್ತರಿಗೆ ಹಿಂದು ಸಂಸ್ಕೃತಿಗೆ ಪೂರಕವಾದ ವಸ್ತ್ರ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಸುಸಜ್ಜಿತ ಗೋಶಾಲೆ ನಿರ್ಮಾಣ ಮತ್ತು ನಿರ್ವಹಣೆ ಮಾಡಬೇಕು. ಬಾಲಸಂಸ್ಕಾರ ಕೇಂದ್ರ ತೆರೆದು ಧಾರ್ಮಿಕ ಶಿಕ್ಶಣ ನೀಡುವ ವ್ಯವಸ್ಥೆ ಮಾಡಬೇಕು.ಉಚಿತ ಸಾಮೂಹಿಕ ವಿವಾಹ, ಉತ್ಸವಗಳ ಸಂದರ್ಭದಲ್ಲಿ ರಾತ್ರಿ ಭೋಜನ ವ್ಯವಸ್ಥೆ ಮಾಡಬೇಕು. ದೇವಸ್ಥಾನದ ಪರಿಸರದಲ್ಲಿ ವ್ಯಾಪಾರ ಇತ್ಯಾದಿಗಳಿಗೆ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಹಿಪಂ, ಭಜರಂಗ ದಳ ಪದಾಧಿಕಾರಿಗಳಾದ ಕ.ಕೃಷ್ಣಪ್ಪ, ಭರತ್ ಕುಮ್ಡೇಲು, ರಾಜೇಶ ಗಂಜಿಮಠ, ಸಂತೋಷ ಸರಪಾಡಿ, ಕೇಶವ ದೈಪಲ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು