1:24 PM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಅವರಿಗೆ ‘ವಂದನಾ ಪ್ರಶಸ್ತಿ’ ಪ್ರದಾ‌‌ನ

03/04/2025, 11:28

ಮಂಗಳೂರುreporterkarnataka.com
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟಾರ‌್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ 22 ನೇ ವಾರ್ಷಿಕ ಮತ್ತು 2025ನೇ ಸಾಲಿನ “ವಂದನಾ ಪ್ರಶಸ್ತಿ” ಯನ್ನು ಮಂಗಳೂರು ಮೂಲದ ಖ್ಯಾತ ಹೋಟೆಲ್ ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸುಧೀರ್ಘ ಸೇವೆ, ಕೊಡುಗೆಯನ್ನು ಪರಿಗಣಿಸಿ ನಗರದ ಹೋಟೆಲ್ ಮೋತಿಮಹಲ್ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿದ ಸಮಾರಂಭದಲ್ಲಿ ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭ ಪ್ರಶಸ್ತಿ ಪುರಸ್ಕೃತ ಡಾ. ಪ್ರಾಕಾಶ್ ಶೆಟ್ಟಿ ಮಾತನಾಡಿ, ಸಾಧನೆಗೆ ದೇವರ ಅನುಗ್ರಹ, ಗುರುಗಳ ಮಾರ್ಗದರ್ಶನ, ಉಪದೇಶ, ಹಿರಿಯರ ಆಶೀರ್ವಾದ, ಗ್ರಾಹಕರ ವಿಶ್ವಾಸ, ಕುಟುಂಬ, ಮಿತ್ರರ ಸಹಕಾರ, ಪ್ರೋತ್ಸಾಹ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ವ್ಯವಹಾರ ದಕ್ಷತೆ, ಪ್ರಾಮಾಣಿಕತೆ, ಶ್ರಮ ಕಾರಣ ಎಂದರು. ರೋಟರಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ. ಸಾಧಕರನ್ನು ಗುರುತಿಸಿ, ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡುವ ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಇನ್ನಷ್ಟು ಸಾಧಿಸಲು ಪ್ರೇರಣೆ ಆಗುತ್ತಿದೆ ಎಂದು ನುಡಿದರು.

ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಾ. ದೇವದಾಸ್ ರ ಪ್ರಶಸ್ತಿ ಪ್ರಧಾನದ ವಿಧಿ ವಿಧಾನವನ್ನು ನೆರವೇರಿಸಿ ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವೆ ಯೋಜನೆಯ ಅಂಗವಾಗಿದ್ದು, ಈ ವಾರ್ಷಿಕ ಪ್ರಶಸ್ತಿಯನ್ನು ಸಾಧಕರನ್ನು ಗುರುತಿಸಿ ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿ ಪ್ರಸ್ತುತ ಸಾಲಿನ ಪ್ರಶಸ್ತಿ ವಿಜೇತರಾದ ಡಾ. ಪ್ರಕಾಶ್ ಶೆಟ್ಟಿಯವರು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಅಭಿನಂದಿಸಿದರು. ರೋಟರ್ಯಾಕ್ಟ್ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ ಪ್ರಶಸ್ತಿ ವಿಜೇತರ ಪರಿಚಯ ಮತ್ತು ಸಾಧನೆಗಳ ಮಾಹಿತಿ ನೀಡಿದರು. ಸಹಾಯಕ ಗವರ್ನರ್ ಕೆ.ಎಂ.ಹೆಗ್ಡೆ ಅಭಿನಂದನಾ ಭಾಷಣ ಮಾಡಿದರು.

ರೋಟರ‌್ಯಾಕ್ಟ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಸಂಜಯ್ ಸಂಸ್ಥೆಯ ಸಾಪ್ತಾಹಿಕ ಗೃಹ ವಾರ್ತಾ ಪತ್ರಿಕೆ “ಸೆಂಟೊರ್” ಬಿಡುಗಡೆಗೊಳಿಸಿದರು. ರೋಟರಿ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷ ಬ್ರಿಯಾನ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸುಧೀರ್ ಶೆಟ್ಟಿಯವರನ್ನು ಸಂಸ್ಥೆಗೆ ನೂತನ ಸದಸ್ಯರಾಗಿ ಸೇರ್ಪಡಿಸಲಾಯಿತು.

ಕಾರ್ಯದರ್ಶಿ ರಾಜೇಶ್ ಸಿತಾರಾಮ್ ವರದಿ ಮಂಡಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಚುನಾಯಿತ ಅಧ್ಯಕ್ಷ ಭಾಸ್ಕರ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು ರೋರ್ಟಾಕ್ಸ್ ಸಂಸ್ಥೆಯ ಕಾರ್ಯದರ್ಶಿ ಅಕ್ಷಯ್ ರೈ ವಂದಿಸಿದರು. ಲೆಕ್ಕ ಪರಿಶೋಧಕ ನಿತಿನ್ ಶೆಟ್ಟಿಯವರು ಈ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು