6:57 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ: ಕೃಷಿ ಇಲಾಖೆ ಮಹತ್ವದ ಆದೇಶ

03/04/2025, 22:49

ಬೆಂಗಳೂರು(reporterkarnataka.com): ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದ್ದು, ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಲಿವೆ.
ಕೃಷಿ ಸಚಿವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿಲಿಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದ್ದ 9 ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ-ಆರ್ಕೆವಿವೈ) ಎಂದು ಮರು ನಾಮಕರಣಗೊಳಿಸಿ ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ವ್ಯಾಪ್ತಿಗೆ ಒಳಪಡುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2024-25ನೇ ಸಾಲಿನಲ್ಲಿ ಪಿಎಂಕೆಎಸ್ವೈ ಮತ್ತು ಪಿಎಂಎಂಎಸ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ ರೂ.274 ಕೋಟಿ ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಇದರ ಅನುಕೂಲ ತಲುಪಲಿದೆ ಹಾಗೆಯೇ ಟಾಪ್ಅಪ್ ಯೋಜನೆಯಡಿ ರೂ.252 ಕೋಟಿಗಳ ಅನುದಾನವನ್ನು ಸೂಕ್ಷ್ಮ ನೀರಾವರಿ ಸಾಧನ ಸಲಕರಣೆಗಳ ಆರ್ಥಿಕ ನೆರವಿಗಾಗಿ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು