1:34 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ; ಜೈಲ್ ಜಾಮರ್ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್

05/04/2025, 21:14

ಮಂಗಳೂರು(reporterkarnataka.com): ನಗರದ ಬಿಜೈನಲ್ಲಿರುವ ಸಬ್ ಜೈಲ್ ನ ಜಾಮರ್ ಸಮಸ್ಯೆಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಜೈಲು ಮುಂಭಾಗ ರಾಸ್ತಾ ರೋಕೋ ಪ್ರತಿಭಟನೆ ನಡೆಯಿತು.


ಈ ವೇಳೆ ಆಕ್ರೋಶದಿಂದ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಒಂದೋ ಜಾಮರ್ ಸಮಸ್ಯೆ ಸರಿಪಡಿಸಿ. ಅಥವಾ ಅದನ್ನು ಕಿತ್ತೊಗೆಯಿರಿ, ಇಲ್ಲವೇ ನಾವೇ ತೆಗೆದು ಬಿಸಾಕುತ್ತೇವೆ ಎಂದು, ಜೈಲು ಅಧಿಕಾರಿಗಳಿಂದ ಹಿಡಿದು ಕಮಿಷನರ್, ಜಿಲ್ಲಾಧಿಕಾರಿ, ಕೊನೆಗೆ ಗೃಹ ಸಚಿವರಿಗೂ ಹೇಳಿ ಆಗಿದೆ. ಕಾಂಗ್ರೆಸ್ಸಿನ ಪರಿಷತ್ ಸದಸ್ಯರೊಬ್ಬರಂತೂ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ಕೊಟ್ಟರೂ ಸಮಸ್ಯೆ ಮಾತ್ರ ಹಾಗೆಯೇ ಇದ್ದು ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ ಸಿಗುತ್ತಿದೆ. ಜೈಲು ಅಧಿಕಾರಿಗಳು ಸರಿಯಾಗಿದ್ದರೆ ಜಾಮರ್ ಅವಶ್ಯಕತೆಯೇ ಬರುವುದಿಲ್ಲ. ವಿಪರ್ಯಾಸವೆಂದರೆ ಈಗಲೂ ಜೈಲಿನೊಳಗೆ ಮೊಬೈಲ್ ನೆಟ್ವರ್ಕ್ ಸಿಗುತ್ತಿದೆ. ಹೊರಗಿರುವ ಜನರಿಗೇ ಸಿಗುತ್ತಿಲ್ಲ. ಇವರ ಬೇಜವಾಬ್ದಾರಿಯಿಂದಾಗಿ ಇತ್ತೀಚೆಗೆ ರೋಗಿಯೊಬ್ಬರು ತುರ್ತು ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ನಡೆದಿದೆ. ಈ ಸಾವಿನ ಹೊಣೆ ಯಾರು ಹೊರುತ್ತಾರೆ? ಜೈಲು ಅಧಿಕಾರಿಗಳೇ? ಉಸ್ತುವಾರಿ ಸಚಿವರೇ? ಅಥವಾ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದರು.
ಆಕ್ರೋಶಿತ ಬಿಜೆಪಿ ಕಾರ್ಯಕರ್ತರು, ಜೈಲಿಗೆ ಹಾಕಲಾಗಿದ್ದ ಬ್ಯಾರಿಕೇಡ್ ನತ್ತ ನುಗ್ಗಿದಾಗ ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ನಡೆದ ತಳ್ಳಾಟದಲ್ಲಿ ಕಂಬ್ಳ ವಾರ್ಡಿನ ಬಿಜೆಪಿ ನಿಕಟಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್ ರವರು ಅಸ್ವಸ್ಥಗೊಂಡು ಕೆಎಂಸಿ ಜ್ಯೋತಿ ಆಸ್ಪತ್ರೆಗೆ ದಾಖಲಾದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರು, ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ಕಿಶೋರ್ ಕೊಟ್ಟಾರಿ, ಭಾನುಮತಿ, ಮನೋಹರ್ ಕದ್ರಿ, ಶಕೀಲಾ ಖಾವ, ಅಶ್ವಿತ್ ಕೊಟ್ಟಾರಿ ಸಹಿತ ಅನೇಕ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು