10:02 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೆಂಗಳೂರು; 2 ದಿನಗಳ ಪ್ರವಾಸದ ಬಳಿಕ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ನಿರ್ಗಮನ; ಆತ್ಮೀಯ ಬೀಳ್ಕೊಡುಗೆ

05/04/2025, 23:45

ಬೆಂಗಳೂರು (reporterkarnataka.com): ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಶನಿವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.


ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಭಾರತ ಸರ್ಕಾರ ಸಚಿವಾಲಯದ ಚಿಲಿ ರಾಯಭಾರಿ ಅಭಿಲಾಶ ಜೋಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ. ಜಿ, ಭಾರತ ಸರ್ಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ. ಪ್ರಪುಲ್ಲಚಂದ್ರ.ಎಸ್., ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತರಾದ ರಮೇಶ್. ಬಿ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಬಸಬರಾಜು.ಎ.ಬಿ., ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಗಳಾದ ಅಜಿತ್ ಜಾನ್ ಜೋಸ್ವಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು