1:43 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Mangaluru | ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

05/04/2025, 23:59

ಮಂಗಳೂರು(reporterkarnataka.com): ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂ ರವರು ಆಗಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂರವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಕೃಷಿ ಸಚಿವರಾಗಿ ಬಾಬೂಜಿಯವರು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹಸಿರು ಕ್ರಾಂತಿಯ ಯೋಜನೆಗೆ ಬೆನ್ನೆಲುಬಾಗಿ ನಿಂತು ದೇಶದ ಕೃಷಿ ಕ್ಷೇತ್ರದಲ್ಲಿ ಅದ್ಭುತ ಪ್ರಗತಿಗೆ ಕಾರಣರಾಗಿದ್ದಾರೆ. ಆಹಾರಕ್ಕಾಗಿ ನಾಗರಿಕರು ಸಂಕಟಪಡುತ್ತಿದ್ದ ಕಾಲವನ್ನು ಆಹಾರ ಧಾನ್ಯಗಳ ಹೆಚ್ಚುವರಿ ಸಂಗ್ರಹವಾಗಿ ಪರಿವರ್ತಿಸಲು ಬಾಬೂಜಿ ಸೇವೆ ಸಲ್ಲಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಸ್ಮರಿಸಿದರು.
ಕೇಂದ್ರ ರಕ್ಷಣಾ ಸಚಿವರಾಗಿ ಬಾಪೂಜಿಯವರು ದೇಶದ ಗಡಿಗಳನ್ನು ಬಾಹ್ಯ ಬೆದರಿಕೆಯಿಂದ ಮುಕ್ತಗೊಳಿಸಿದರು. ವಿಶೇಷವಾಗಿ ಬಾಂಗ್ಲಾ ಯುದ್ಧ ಸಂದರ್ಭದಲ್ಲಿ ಅವರ ನಾಯಕತ್ವ ದೇಶದ ರಕ್ಷಣೆಗೆ ಸಾಕಷ್ಟು ಪರಿಣಾಮ ಬೀರಿತು. ಕಾರ್ಮಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ ಬಾಪೂಜಿಯವರು ಇಎಸ್‍ಐ ವ್ಯವಸ್ಥೆಯನ್ನು ಜಾರಿಗೆ ತರಲು ಶ್ರಮಿಸಿದರು. ಅಲ್ಲದೆ ಹಲವಾರು ಕಾರ್ಮಿಕಪರ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸಿದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಮಾರಂಭದಲ್ಲಿ ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಅವರು ವಿಶೇಷ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್. ಹೇಮಲತಾ ಸ್ವಾಗತಿಸಿ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು