12:10 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

BJP | ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

06/04/2025, 21:38

ಬೆಂಗಳೂರು(reporterkarnataka.com): ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂ. ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು.
ಕಾಂಗ್ರೆಸ್‌ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಮಂಗಳೂರಿನಲ್ಲಿ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ ಮಾಡುತ್ತಿದ್ದಾರೆ. ಈಗ ಮೀಸಲಾತಿಯೂ ಸೇರಿಕೊಂಡು ಹೆಚ್ಚಾಗಿದೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದರು.
ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಡೆತ್‌ನೋಟ್‌ ಗಿಂತ ಹೆಚ್ಚಿನ ಸಾಕ್ಷಿ ಬೇಡವೆಂದು ಇವರೇ ಹೇಳುತ್ತಿದ್ದರು. ವಿನಯ್‌ ಅವರ ಡೆತ್‌ನೋಟ್‌ ಪರಿಗಣಿಸುತ್ತಲೇ ಇಲ್ಲ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ಈಶ್ವರಪ್ಪನವರ ವಿಚಾರದಲ್ಲಿ ಇವರೇ ಹೋರಾಟ ಮಾಡಿದ್ದರು. ಈಗ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.
ವಾಟ್ಸ್ ಅಪ್ ಗ್ರೂಪ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಥವಾ ಶಾಸಕರ ವಿರುದ್ಧ ಸಂದೇಶ ಹಾಕಿದರೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗುತ್ತಿದೆ. ಇದು ದೊಡ್ಡ ದಂಧೆಯಾಗಿ ಬೆಳೆದಿದೆ. ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ಆಗಲೂ ದೂರು ದಾಖಲಿಸುತ್ತಾರೆ‌ ಎಂದು ದೂರಿದರು.

ಇತ್ತೀಚಿನ ಸುದ್ದಿ

ಜಾಹೀರಾತು