2:48 PM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ…

ಇತ್ತೀಚಿನ ಸುದ್ದಿ

May Day | ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

07/04/2025, 18:04

ಬೆಂಗಳೂರು(reporterkarnataka.com): ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.


ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಖಾಯಂ ಮಾಡಲಾಗುವುದು ಎಂದು ಸಿಎಂ ನುಡಿದರು.
*ವಾಹನ ಚಾಲಕರಿಗೂ ಖಾಯಂ:*
ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.
*ನಗದು ರಹಿತ ಆರೋಗ್ಯ ಕಾರ್ಡ್:* ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

*ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು: ಸಿಎಂ*
ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.
ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು.
ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು