6:04 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು