11:52 PM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್‌. ಸುರೇಶ್‌ ಕುಮಾರ್‌

07/04/2025, 20:59

ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.
ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಆಟೋ ಬಳಸುವವರ ಪೈಕಿ ಮಹಿಳೆಯರೇ ಹೆಚ್ಚು. ಆದರೆ, ಕೆಲವೊಂದು ಸಂದರ್ಭದಲ್ಲಿ ಮಹಿಳೆಯರ ಮೇಲೆ ಕಿರುಕುಳದಂತ ಸುದ್ದಿ ಕೇಳಿಬರುತ್ತವೆ, ಮಹಿಳೆಯರೇ ಆಟೋ ಚಾಲನೆಗೆ ಇಳಿದರೆ, ಇತರೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸುರಕ್ಷಿತವಾಗಿ ಹಾಗೂ ಧೈರ್ಯವಾಗಿ ಯಾವ ಸಂದರ್ಭದಲ್ಲಾದರೂ ಆಟೋದಲ್ಲಿ ಸಂಚಾರ ಮಾಡಲು ಮುಂದಾಗುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಆಟೋ ಚಾಲನಾ ವೃತ್ತಿಗೆ ಆಗಮಿಸಲಿ. ಇದರಿಂದ ಸ್ತ್ರೀ ಆರ್ಥಿಕವಾಗಿಯೂ ಸಬಲೀಕರಣರಾಗಲಿದ್ದಾರೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಆಟೋ ಚಾಲನೆಯಲ್ಲೂ ಯಾರಿಗೇನು ಕಡಿಮೆ ಇಲ್ಲದಂತೆ ಮುಂದಾಗುತ್ತಿರುವುದು ಅಭಿನಂದನಾರ್ಹ. ಆಸಕ್ತ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡುವಂತಹ ಕೆಲಸ ಮಾಡುತ್ತಿರುವ ಬಿ.ಪ್ಯಾಕ್‌ ಮತ್ತು ಆದರ್ಶ ಆಟೋ ಸಂಸ್ಥೆಯ ಕೆಲಸ ಶ್ಲಾಘಿಸುವೆ, ಈ ಉಚಿತ ತರಬೇತಿ ಕಾರ್ಯಕ್ರಮ ಇತರೆ ಭಾಗಗಲ್ಲೂ ಪ್ರಾರಂಭಿಸಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಪ್ಯಾಕ್ ಸದಸ್ಯರಾದ ಮಿಮಿ ಪಾರ್ಥಸಾರಥಿ, ಅನಿಶಾ ಭಂಡಾರಿ, ಡಾ. ಸಂಪತ್ ಸಿ, ರಾಘವೇಂದ್ರ ಪೂಜಾರಿ, ದೇವಿಕಾ ರಾಜ್ ಹಾಗೂ ತರಬೇತಿದಾರರದ ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು